ಮಂಡ್ಯ: ಕಾವೇರಿ ಪ್ರತಿಭಟನೆಗೆ ಶಾಸಕ ಜಿ.ಟಿ.ದೇವೇಗೌಡ ಸಾಥ್ ನೀಡಿದ್ದು, ಜೆಡಿಎಸ್ ಕಾರ್ಯಕರ್ತರ ದಳಪತಿಗಳು ಜೊತೆ ಹೆಜ್ಜೆ ಹಾಕುತ್ತಿದ್ದಾರೆ.
ಈ ವೇಳೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ಕಾಂಗ್ರೆಸ್ ನವರು ರೈತರನ್ನು ಸಂಪೂರ್ಣವಾಗಿ ಸಮಾಧಿ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ.
ಕಾವೇರಿ ನಮ್ಮೆಲ್ಲರ ತಾಯಿ. ಬದುಕಲು ಕಾವೇರಿ ನೀರು ಬೇಕು. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ತಮಿಳುನಾಡಿಗೆ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯಗೆ ಬಹಳ ವರ್ಷಗಳ ಅನುಭವ ಇದೆ. ಇವತ್ತಿನ ಪರಿಸ್ಥಿತಿ ಬರಗಾಲ ಬಂದಿದೆ. ಇದನ್ನು ಪ್ರಾಧಿಕಾರದ ಗಮನಕ್ಕೆ ತಂದ್ರ? ಪ್ರಾಧಿಕಾರದ ಮುಂದೆ ಇವರು ಯಾರು ಹೋಗಿಲ್ಲ. ಸರ್ಕಾರ ಬಂದು ಮೂರು ತಿಂಗಳು ಇದೆ. ಬೆಂಗಳೂರಿನವರಿಗೆ ನೀರಿಲ್ಲ. ಬೆಂಗಳೂರಿನಲ್ಲಿ ಯಾವ ಹೋರಾಟ ಇಲ್ಲ. ನೀವೇಲ್ಲರು ನೀರು ಇಲ್ಲದೆ ಉಳಿಯುತ್ತಿರಾ? ರೈತರ ಹೋರಾಟಕ್ಕೆ ಬನ್ನಿ ಎಂದರು.
ಒಂದು ಹನಿ ನೀರು ಕೂಡ ತಮಿಳುನಾಡಿಗೆ ಬಿಡಬಾರದು. ಕಾಂಗ್ರೆಸ್ ಸರ್ಕಾರ ರೈತರ ಜೀವದ ಜೊತೆ ಚೆಲ್ಲಾಟವಾಡ್ತಿದೆ. ನ್ಯಾಯ ದೇವತೆ ಒಪ್ಪುತ್ತಾಳಾ? ಕೂಡಲೇ ಪ್ರಾಧಿಕಾರ ಮುಂದೆ ಹೋಗಿ ಸಂಕಷ್ಟ ಸೂತ್ರ ಅನುಸರಿಸಿದ್ದಿರಾ? ಬರಗಾಲ ಘೋಷಣೆ ಮಾಡಿಲ್ಲ. ರೈತರನ್ನ ಸಂಪೂರ್ಣವಾಗಿ ಸಮಾಧಿ ಮಾಡ್ತಾರೆ ಇವರು.
ಸರ್ಕಾರ ಬರಿ ಗ್ಯಾರಂಟಿ ಗುಂಗಲ್ಲಿ ಇದೆ. ನಿಮ್ಮ ಗೌರವ ಉಳಿದುಕೊಳ್ಳಬೇಕಾದ್ರೆ ನೀರು ನಿಲ್ಲಿಸಿ. ತಮಿಳುನಾಡಿನಲ್ಲಿ ಒಗ್ಗಟ್ಟು ಇದೆ ನಮ್ಮಲ್ಲಿ ಯಾಕೆ ಒಗ್ಗಟ್ಟು ಇಲ್ಲ ಎಂದು ಬೇಸರಿಸಿದರು.
ಸಿಲ್ವರ್ ಜ್ಯೂಬಿಲಿ ಪಾರ್ಕ್ ನಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಜೆಡಿಎಸ್ ನಾಯಕರಾದ ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಡಾ.ಕೆ.ಅನ್ನದಾನಿ, ಹೆಚ್.ಟಿ.ಮಂಜು ಭಾಗಿಯಾಗಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.