ಮನೆ ರಾಜ್ಯ ಲಾರಿಗೆ ಕಾರು ಡಿಕ್ಕಿ: ನಾಲ್ವರ ಸಾವು, ಮೂವರ ಸ್ಥಿತಿ ಗಂಭೀರ

ಲಾರಿಗೆ ಕಾರು ಡಿಕ್ಕಿ: ನಾಲ್ವರ ಸಾವು, ಮೂವರ ಸ್ಥಿತಿ ಗಂಭೀರ

0

ಚಿತ್ರದುರ್ಗ: ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ  ನಡೆದಿದೆ.

ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಕಾರ್ ತೆರಳುತ್ತಿತ್ತು. ಅಪಘಾತದ ತೀವ್ರತೆಗೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು  ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.