ಮನೆ ರಾಜ್ಯ ಸಿದ್ದರಾಮಯ್ಯ ಲಾಟರಿ ಮುಖ್ಯಮಂತ್ರಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಸಿದ್ದರಾಮಯ್ಯ ಲಾಟರಿ ಮುಖ್ಯಮಂತ್ರಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

0

ಮೈಸೂರು: ಸಿದ್ದರಾಮಯ್ಯ ಲಾಟರಿ ಮುಖ್ಯಮಂತ್ರಿ. ಅವರು ಯಾವಾಗಲೂ ತಮ್ಮ ಶಕ್ತಿ ಮೇಲೆ ಸಿಎಂ ಆಗಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  2013ರಲ್ಲಿ ಕೆಜೆಪಿ- ಬಿಜೆಪಿ ಅಂತ ವಿಭಾಗವಾಗಿತ್ತು. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು. ಈ ಬಾರಿ ಗ್ಯಾರಂಟಿ ಹೇಳಿಕೊಂಡು ಸಿಎಂ ಆಗಿಬಿಟ್ಟರು.  ಸಿದ್ದರಾಮಯ್ಯ ಅಪ್ಪಿತಪ್ಪಿ ಸಿಎಂ ಆಗಿದ್ದಾರೆ. ಮುಂದೆ ಲೋಕಸಭೆ ಚುನಾವಣೆ ಬರುತ್ತಿದೆ. ಕಾಂಗ್ರೆಸ್‌ನವರ ಸ್ಥಿತಿ ಏನೆಂದು ಗೊತ್ತಾಗುತ್ತದೆ. ಗ್ಯಾರಂಟಿ ಯೋಜನೆಗಳು ಏನಾಗುತ್ತದೆಂದು ನೋಡುತ್ತಿರಿ ಎಂದರು.

ಸಿದ್ದರಾಮಯ್ಯ ಮುಸಲ್ಮಾನರ ದತ್ತು ಪುತ್ರರಾಗಿದ್ದಾರೆ. ಮುಸಲ್ಮಾನರ ಜಾಗದಲ್ಲಿ ನಿಂತು ನರೇಂದ್ರ ಮೋದಿ, ಪ್ರತಾಪ್ ಸಿಂಹ ವಿರುದ್ಧ ಮಾತನಾಡಿಬಿಟ್ಟರೆ ಕಾಂಗ್ರೆಸ್‌ಗೆ ಮತ ಬರುತ್ತದೆ ಎಂದುಕೊಂಡಿದ್ದಾರೆ. ಅದೇ ಕಾರಣಕ್ಕೆ ಮುಸಲ್ಮಾನರ ಎದುರು ಭಾಷಣ ಮಾಡಿದ್ದಾರೆ. ಇದೆಲ್ಲ ಮುಂದಿನ ಚುನಾವಣೆಯಲ್ಲಿ ನಡೆಯಲ್ಲ‌

ಸನಾತನ ಹಿಂದೂ ಧರ್ಮ ಮಲೇರಿಯಾ ಡೆಂಗ್ಯೂ ಇದ್ದಂತೆ ಎಂಬ ಉದಯ ಸ್ಟಾಲಿನ್ ಹೇಳಿಕೆ ವಿಚಾರಕ್ಕೆ ಕಿಡಿಕಾರಿದ ಈಶ್ವರಪ್ಪ, ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದರೆ ಭಸ್ಮವಾಗ್ತಾರೆ. ಇವನೇನು ಆಕಾಶದಿಂದ ಇಳಿದು ಬಂದಿಲ್ಲ. ತಾಕತ್ತಿದ್ದರೆ ಅವನ ಧರ್ಮಕ್ಕೆ ಟೀಕೆ ಮಾಡಲಿ, ಮುಸ್ಲಿಂ ಧರ್ಮಕ್ಕೆ ಟೀಕೆ ಮಾಡಲಿ ನೋಡೋಣ ಎಂದರು.

ತಮ್ಮ ಮಗನಿಗೆ ಹಾವೇರಿ ಲೋಕಸಭಾ ಟಿಕೆಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ನನ್ನ ಮಗ ಕೂಡ ಎಂಪಿ ಟಿಕೆಟ್ ಆಕಾಂಕ್ಷಿ. ಹಾವೇರಿಯಿಂದ ಟಿಕೆಟ್ ಕೇಳಿದ್ದೇವೆ. ಹೈಕಮಾಂಡ್ ಯಾವ ತೀರ್ಮಾನ ಮಾಡುತ್ತದೆಂದು ಕಾದು ನೋಡುತ್ತೇವೆ. ಟಿಕೆಟ್ ಕೊಟ್ಟರೆ ಸ್ಪರ್ದೆ ಮಾಡುತ್ತಾನೆ. ಇಲ್ಲದಿದ್ದರೆ ಟಿಕೆಟ್ ಕೊಟ್ಟವರಿಗೆ ಸಪೋರ್ಟ್ ಮಾಡುತ್ತೇವೆ ಎಂದರು.

ಬೆಂಗಳೂರಿನಲ್ಲಿ ಬಿ.ಎಲ್  ಸಂತೋಷ್ ಸಭೆಯಲ್ಲಿ ಭಾಗವಹಿಸಿದವರು ಪಕ್ಷ ಕಟ್ಟಿದವರಲ್ಲ ಎಂಬ ರೇಣುಕಾಚಾರ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಟಾರ್ಗೆಟ್ ಕಾಂಗ್ರೆಸ್ ಪಕ್ಷ. ರೇಣುಕಾಚಾರ್ಯಗೆ ಪಕ್ಷದಿಂದ ನೋಟಿಸ್ ನೀಡಲಾಗಿದೆ. ಅವರ ಹೇಳಿಕೆಗೆ ಯಾಕೆ ಮಹತ್ವ ಕೊಡುತ್ತೀರಿ. ನಮ್ಮ ಎದುರಾಳಿ ಕಾಂಗ್ರೆಸ್, ರೇಣುಕಾಚಾರ್ಯ ಹೇಳಿಕೆಗೆ ಉತ್ತರ ಕೊಡಲ್ಲ ಎಂದರು.