ಬೆಂಗಳೂರು: 2023-24ನೇ ಶೈಕ್ಷಣಿಕ ಸಾಲಿನಿಂದ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯು ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಇದುವರೆಗೆ ವರ್ಷಕ್ಕೆ 2 ಪರೀಕ್ಷೆ ಮಾತ್ರ ನಡೆಸುತ್ತಿದ್ದ ಶಿಕ್ಷಣ ಇಲಾಖೆ, ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಫೇಲ್ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದು. ವರ್ಷದಲ್ಲಿ ಇನ್ಮುಂದೆ ಕಲಿಕಾ ಚೇತರಿಕೆಯ ಕಾರಣದಿಂದಾಗಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಘೋಷಣೆ ಮಾಡಿದರು.
ಯಾವುದೇ ಕಾರಣಕ್ಕೂ ಮಕ್ಕಳಿಗೆ ಒಂದು ವರ್ಷ ವ್ಯರ್ಥ ಆಗಬಾರದು ಎಂದು ವರ್ಷದಲ್ಲಿ ಮೂರು ಬಾರಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವಂತಹ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ವೇಳಾಪಟ್ಟಿ
ಪರೀಕ್ಷೆ-1 ಮಾರ್ಚ್ 1ರಿಂದ ಮಾರ್ಚ್ 25ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-2 ಮೇ 15ರಿಂದ ಜೂನ್ 5ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-3 ಜುಲೈ 12ರಿಂದ ಜುಲೈ 30ರವರೆಗೆ ನಡೆಸಲು ನಿರ್ಧಾರ
10ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿ
ಪರೀಕ್ಷೆ-1 ಮಾರ್ಚ್ 30ರಿಂದ ಏಪ್ರಿಲ್ 15ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-2 ಜೂನ್ 12ರಿಂದ ಜೂನ್ 19ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-3 ಜುಲೈ 29ರಿಂದ ಆಗಸ್ಟ್ 5ರವರೆಗೆ ನಡೆಸಲು ತೀರ್ಮಾನ
ಇದನ್ನು ಇಂದು (ಸೆಪ್ಟೆಂಬರ್ 05) ವಿಧಾನಸಸೌಧದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದನ್ನು ಘೋಷಿಸಿದರು. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.
ಒಟ್ಟು ಅಂಕ ಪೈಕಿ ಕನಿಷ್ಠ ಅಂಕಗಳನ್ನ ತೇರ್ಗಡೆ ಮಾನದಂಡವಾಗಿ ಪರಿಗಣನೆ ಮಾಡಲಾಗುತ್ತದೆ. ಕನಿಷ್ಠ ಅಂಕಗಳೊಂದಿಗೆ ವಿದ್ಯಾರ್ಥಿ ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿಗೆ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗುತ್ತದೆ. ಕಲಿಕಾ ಗುಣಮಟ್ಟ ಹಾಗೂ ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಲು ಸರ್ಕಾರ ಈ ಹೊಸ ನಿಯಮವನ್ನು ಘೋಷಣೆ ಮಾಡಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.