ಮನೆ ರಾಜ್ಯ ದಸರಾ-2023: ಅರಮನೆಗೆ ಆಗಮಿಸಿದ ಗಜಪಡೆ

ದಸರಾ-2023: ಅರಮನೆಗೆ ಆಗಮಿಸಿದ ಗಜಪಡೆ

0

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ೨೦೨೩ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದ್ದು, ಇಂದು (ಸೆ.೦೫) ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿತು.

ಜಿಲ್ಲಾಡಳಿತ ಮತ್ತು ಅರಮನೆ ಮಂಡಳಿ ವತಿಯಿಂದ ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01 ರಿಂದ 12.51 ಗಂಟೆಯ ಅಭಿಜಿತ್ ಲಗ್ನದಲ್ಲಿ ಅಂಬಾರಿ ಆನೆ ಅಭಿಮನ್ಯು ನರೆತೃತ್ವದ ವಿಜಯ, ವರಲಕ್ಷ್ಮಿ, ಧನಂಜಯ, ಮಹೇಂದ್ರ, ಭೀಮ, ಗೋಪಿ, ಕಂಜನ್ ಒಳಗೊಂಡ ಗಜಪಡೆಗೆ ಪಾದಪೂಜೆ, ದ್ವಾರಪಾಲಕ ಪೂಜೆ, ಚಾಮರಸೇವೆ ಮಾಡಿ ಪುಷ್ಪಾರ್ಚನೆ ಅರ್ಪಿಸಲಾಯಿತು.

ಜಾನಪದ ಕಲಾತಂಡಗಳ ನೃತ್ಯ, ಪೂರ್ಣಕುಂಭ ಸ್ವಾಗತ ಮತ್ತು ಮಂಗಳ ವಾದ್ಯ, ಪೊಲೀಸ್ ಬ್ಯಾಂಡ್ ನಿನಾದದೊಂದಿಗೆ ಜಯಮಾರ್ತಾಂಡ ದ್ವಾರದಿಂದ ಅರಮೆನೆಯ ಅಂಗಳಕ್ಕೆ ಬರಮಾಡಿಕೊಳ್ಳಲಾಯಿತು. ಅಭಿಮನ್ಯು ನೇತೃತ್ವದ ಗಜಪಡೆಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದವು.

ಅರಮನೆ ಮುಂಬಾಗ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರು ಪುಷ್ಪಾರ್ಚನೆ ಮಾಡಿದರು. ನಂತರ ಗಜಪಡೆಯ ಕಾವಾಡಿಗರು ಮತ್ತು ಮಾವುತರಿಗೆ ಮೂಲಭೂತ ಸಾಮಾಗ್ರಿಗಳನ್ನು ವಿತರಿಸಿದರು. ದಸರಾವನ್ನು ಅತ್ಯುತ್ತಮವಾಗಿ ನಡೆಸಿಕೊಡುವಂತೆ ದಸರಾ ವಿಶೇಷ ಕರ್ತವ್ಯ ಅಧಿಕಾರಿಗಳಿಗೂ ಕೂಡ ಸಚಿವರು ತಾಂಬೂಲ ನೀಡಿದರು.

ಜಾನಪದ ಕಲಾತಂಡಗಳ ನೃತ್ಯ, ಪೂರ್ಣಕುಂಭ ಸ್ವಾಗತ ಮತ್ತು ಮಂಗಳ ವಾದ್ಯ, ಪೊಲೀಸ್ ಬ್ಯಾಂಡ್ ನಿನಾದದೊಂದಿಗೆ ಜಯಮಾರ್ತಾಂಡ ದ್ವಾರದಿಂದ ಅರಮೆನೆಯ ಅಂಗಳಕ್ಕೆ ಬರಮಾಡಿಕೊಳ್ಳಲಾಯಿತು. ಅಭಿಮನ್ಯು ನೇತೃತ್ವದ ಗಜಪಡೆಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದವು.

ಅರಮನೆ ಮುಂಬಾಗ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರು ಪುಷ್ಪಾರ್ಚನೆ ಮಾಡಿದರು. ನಂತರ ಗಜಪಡೆಯ ಕಾವಾಡಿಗರು ಮತ್ತು ಮಾವುತರಿಗೆ ಮೂಲಭೂತ ಸಾಮಾಗ್ರಿಗಳನ್ನು ವಿತರಿಸಿದರು. ದಸರಾವನ್ನು ಅತ್ಯುತ್ತಮವಾಗಿ ನಡೆಸಿಕೊಡುವಂತೆ ದಸರಾ ವಿಶೇಷ ಕರ್ತವ್ಯ ಅಧಿಕಾರಿಗಳಿಗೂ ಕೂಡ ಸಚಿವರು ತಾಂಬೂಲ ನೀಡಿದರು.

ಆನೆಗಳ ಜೊತೆ ಸರಿಸುಮಾರು ಎರಡು ತಿಂಗಳ ಕಾಲ ಅರಮನೆ ಆವರಣದಲ್ಲಿ ವಾಸವಿರುವ ಮಾವುತರು ಮತ್ತು ಕಾವಾಡಿಗರ ಕುಟುಂಬಕ್ಕೆ ಮೂಲ ಸೌಲಭ್ಯದ ಜೊತೆಗೆ ಅವರ ಮಕ್ಕಳಿಗೆ ತಾತ್ಕಾಲಿಕವಾಗಿ ಶಾಲೆ ಆರಂಭಿಸಲಾಗುವುದು. ಈ ಅವಧಿಯಲ್ಲಿ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲಾಗುತ್ತದೆ ಎಂದು ತಿಳಿಸಿದರು.

ದಸರಾ ಸಂಬಂಧ ನಗರದಲ್ಲಿ ಕಾಮಗಾರಿ ಕೈಗೊಳ್ಳಲು ಈಗಾಗಲೇ ಮುಖ್ಯಮಂತ್ರಿಗಳು ಅಗತ್ಯ ಅನುದಾನವನ್ನು ಬಿಡುಗಡೆಗೊಳಿಸುವಂತೆ ಆರ್ಥಿಕ ಇಲಾಖೆ ಸೂಚನೆ ನೀಡಿದ್ದಾರೆ. ಕಳೆದ ಬಾರಿ ನಾನು ಲೋಕೋಪಯೋಗಿ ಸಚಿವನಾದ್ದಾಗಲೇ ಮೈಸೂರಿನಲ್ಲಿ ಅನೇಕ ಗುಣಾತ್ಮಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಅದರಂತೆ ದಸರಾಗೆ ಅಗತ್ಯವಿರುವ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಬರಪೀಡಿತ ತಾಲ್ಲೂಕುಗಳನ್ನು ಮಾನದಂಡಗಳ ಮುಖೇನ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಸದ್ಯದಲ್ಲಿ ಎಚ್.ಡಿ.ಕೋಟೆ ಮತ್ತು ತಿ.ನರಸೀಪುರ ಬರಪೀಡಿತ ತಾಲ್ಲೂಕು ಎಂಬ ವರದಿ ಇದೆ. ಮಳೆ ಪ್ರಮಾಣದ ಆಧಾರವನ್ನು ಗಮನದಲ್ಲಿರಿ ಸಚಿವ ಸಂಪುಟ ಸಭೆಯಲ್ಲಿ ಎಲ್ಲವನ್ನೂ ಕೂಲಂಕಷವಾಗಿ ಚರ್ಚೆಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷ ನಡೆಯುತ್ತಿರುವುದು ಗಮನದಲ್ಲಿದೆ. ಈ ಸಂಬಂಧ ಅರಣ್ಯ ಸಚಿವರೊಂದಿಗೆ ಚರ್ಚಿಸಲಾಗಿದೆ. ಸಂಘರ್ಷ ತಡೆಯಲು ಈಗಾಗಲೇ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಎಚ್.ಡಿ.ಕೋಟೆಯಲ್ಲಿ ಮಗುವಿನ ಮೇಲೆ ದಾಳಿ ಮಾಡಿರುವ ಹುಲಿಯನ್ನು ಹಿಡಿಯಲು ಸರ್ಕಾರ ಸೂಚನೆ ನೀಡಿದೆ. ಕಾಡಂಚಿನ ಜನರ ರಕ್ಷಣೆಗೆ ಹಾಗೂ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್, ಎಸ್.ಪಿ ಸೀಮಾ ಲಾಟ್ಕರ್, ಡಿಸಿಪಿ ಮುತ್ತುರಾಜ್ ಜಾನ್ಹವಿ, ಡಿಸಿಎಫ್ ಸೌರಭ್ ಕುಮಾರ್, ಸಂಸದ ಪ್ರತಾಪಸಿಂಹ, ಶಾಸಕರಾದ ಶ್ರೀವತ್ಸ ಹರೀಶ್ ಗೌಡ, ಎಂಎಲ್‌ಸಿ ಸಿ.ಎನ್ ಮಂಜೇಗೌಡ ಮೇಯರ್ ಶಿವಕುಮಾರ್, ಅರಮನೆ ಉಪನಿರ್ದೇಶಕ ಟಿ.ಎಸ್ ಸುಬ್ರಮಣ್ಯ ಭಾಗಿಯಾಗಿದ್ದರು.