ಮನೆ ಸ್ಥಳೀಯ ಮೈಸೂರು: ತಾಲ್ಲೂಕುವಾರು ಲೋಕಾಯುಕ್ತ ಅಧಿಕಾರಿಗಳ ಭೇಟಿ

ಮೈಸೂರು: ತಾಲ್ಲೂಕುವಾರು ಲೋಕಾಯುಕ್ತ ಅಧಿಕಾರಿಗಳ ಭೇಟಿ

0

ಮೈಸೂರು:- ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳು ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬಂಧಪಟ್ಟ ಸಾರ್ವಜನಿಕ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಅಡಿಯಲ್ಲಿ ಕ್ರಮಬದ್ಧವಾಗಿ ಭರ್ತಿ ಮಾಡಿದ ದೂರುಗಳನ್ನು ನಮೂನೆ-1 ರಲ್ಲಿ ಮತ್ತು ನಮೂನೆ-2 ರಲ್ಲಿ ಪ್ರಮಾಣ ಪತ್ರಗಳನ್ನು ಅಗತ್ಯ ದಾಖಲಾತಿಗಳನ್ನು ಸ್ವೀಕರಿಸುವ ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ಸೆಪ್ಟೆಂಬರ್ 13 ರಂದು ಬೆಳಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಕೆ.ಆರ್ ನಗರ ತಾಲೂಕಿನ ತಾಲೂಕು ಕಚೇರಿ ಸಭಾಂಗಣ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪ್ರವಾಸಿ ಮಂದಿರ ಹಾಗೂ ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲೂಕಿನ ತಾಲೂಕು ಕಚೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.