ಮನೆ ಅಪರಾಧ ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ

0

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಯುವಕನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ  ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಲ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಯೋಗೇಶ್ (32) ಕೊಲೆಯಾದ ದುರ್ದೈವಿ. ಪ್ರದೀಪ್ (31) ಚಾಕು ಇರಿದು ಕೊಲೆಗೈದ ದುಷ್ಕರ್ಮಿ.

ಕೊಲೆಯಾದ ಯೋಗೇಶ್, ಆತನ ತಾಯಿ ಭಾಗ್ಯಮ್ಮ ಜೊತೆ ಪ್ರದೀಪ್ ಪದೇ ಪದೇ ಜಗಳ ಮಾಡುತ್ತಿದ್ದ. ನಿನ್ನೆ ಸಂಜೆಯೂ ಶುರುವಾದದ ಜಗಳ ವಿಕೋಪಕ್ಕೆ ತಿರುಗಿತ್ತು.  ಇದರಿಂದ ಕೋಪಗೊಂಡ ಪ್ರದೀಪ್ ಮನೆಯಲ್ಲಿದ್ದ ಚಾಕು ತಂದು ಯೋಗೇಶ್ ಗೆ ಇರಿದಿದ್ದಾನೆ.

ತಕ್ಷಣವೇ ಯೋಗೇಶನನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದರೂ ಕೂಡ ತೀವ್ರ ರಕ್ತ ಸ್ರಾವದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಯೋಗೇಶ್ ಸಾವನ್ನಪ್ಪಿದ್ದಾನೆ.

ಸದ್ಯ ಕೊಲೆಗೈದ ಪ್ರದೀಪ್ ಪರಾರಿಯಾಗಿದ್ದು, ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಲೆಮರೆಸಿಕೊಂಡಿರುವ ಆರೋಪಿ ಪ್ರದೀಪ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.