ಗದಗ: ಕಳೆದ ಬಾರಿ ಗೃಹ ಸಚಿವನಾಗಿದ್ದಾಗ ಸುಮಾರು 12 ಸಾವಿರ ಸಿಬ್ಬಂದಿಗೆ ಪ್ರಮೋಷನ್ಸ್ ಕೊಟ್ಟಿದ್ದೆ. ಈಗ 6 ನೂರು ಎಎಸ್ ಐ ಗಳಿಗೆ ಒಂದು ತಿಂಗಳಲ್ಲಿ ಪ್ರಮೋಷನ್ ಕೊಡ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹಿರಿಯ ಅಧಿಕಾರಿಗಳಿಗೆ ಪ್ರಮೋಷನ್ ನೀಡದ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದರು.
ಗದಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,ಪೊಲೀಸ್ ಸಿಬ್ಬಂದಿಗೆ ವೇತನದಲ್ಲಿ ತಾರತಮ್ಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಭತ್ಯೆಯಲ್ಲಿ ಕೆಲವೊಂದು ಮಾಡಿದ್ದಾರೆ. 6ನೇ ವೇತನ ಆಯೋಗ ಜಾರಿಯಾದರೂ ಸಹ ಕೆಲವೊಂದು ಹಾಗೇ ಉಳಿದಿವೆ. ಅಂತವುಗಳನ್ನ ಪರಿಶೀಲನೆ ಮಾಡಿ ಮುಂದಿನ ದಿನಗಳಲ್ಲಿ ಮಾಡ್ತೇವೆ. ಉತ್ತರ ಕರ್ನಾಟಕದ ಪೊಲೀಸ್ ಸಿಬ್ಬಂದಿ ರೇಂಜ್ ನ ಹೊರಗಡೆ ಉಳಿದಿದ್ದಾರೆ. ಹೀಗಾಗಿ ನಿಯಮಗಳನ್ನು ಬದಲಾವಣೆ ಮಾಡುವ ಅಗತ್ಯತೆ ಇದೆ ಎಂದರು.
ಸನಾತನ ಧರ್ಮದ ವಿಚಾರವಾಗಿ ಸೈಲೆಂಟ್ ಆದ ಗೃಹ ಸಚಿವ ಡಾ.ಜಿ ಪರಮೇಶ್ವರ, ಆಯ್ತು ಬಿಡಿ ಎಲ್ಲಾ ವಿಶ್ಲೇಷಣೆ ಮಾಡಿಯಾಗಿದೆ ಮುಗಿದು ಹೋಗಿದೆ ಮತ್ಯಾಕೆ ಈ ವಿಚಾರ ಎಂದು ಹೇಳಿದ್ದಾರೆ.
ಡಿಎಂಕೆ ನಾಯಕ ಏ ರಾಜಾ ಅವರ ಹೇಳಿಕೆಗೆ ನಾನ್ಯಾಕೇ ಪ್ರತಿಕ್ರಿಯೆ ಕೊಡಬೇಕು ಎಂದ ಅವರು, ಆ ವಿಚಾರ ಬಿಟ್ಟು ಹೊಸ ವಿಚಾರ ಕೇಳಿ. ಸರಕಾರದ ಬಗ್ಗೆ ಅಷ್ಟೇ ಕೇಳಿ ಎಂದರು.
ದೇವೇಗೌಡರು ಹಾಗೂ ಅಮಿತ್ ಶಾ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿ, ಅದು ಅವರಿಗೆ ಬಿಟ್ಟಿದ್ದು. ಚುನಾವಣೆ ಬಳಿಕ ಅದರ ಎಫೆಕ್ಟ್ ಗೊತ್ತಾಗುತ್ತೆ. ಅವರ ಭೇಟಿಯಿಂದ ನಮಗೇನೂ ಆಗಲ್ಲ ನಾವಿನ್ನೂ ಸ್ಟ್ರಾಂಗ್ ಆಗ್ತೇವೆ ಎಂದು ತಿಳಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.