ಮನೆ ಅಪರಾಧ ಪಿಎಸ್ಐ ಅಕ್ರಮ ನೇಮಕಾತಿ: ಶಾಸಕರ ಗನ್ ಮ್ಯಾನ್ ಬಂಧನ

ಪಿಎಸ್ಐ ಅಕ್ರಮ ನೇಮಕಾತಿ: ಶಾಸಕರ ಗನ್ ಮ್ಯಾನ್ ಬಂಧನ

0

ಕಲಬುರಗಿ(Kalburgi): ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಅಫಜಲಪುರ ಶಾಸಕ ಎಂ.ವೈ.ಪಾಟೀಲ ಅವರ ಗನ್ ಮ್ಯಾನ್ ಹಯ್ಯಾಳಿ ದೇಸಾಯಿ ಹಾಗೂ ಸಿಎಆರ್ ಪೊಲೀಸ್ ಕಾನ್ ಸ್ಟೆಬಲ್ ರುದ್ರಗೌಡ ಪಾಟೀಲ ಎಂಬುವವರನ್ನು ಗುರುವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಇದರೊಂದಿಗೆ ಬಂಧಿತರ ಸಂಖ್ಯೆ ಒಂಬತ್ತಕ್ಕೆ ಏರಿದೆ. ಈಗಾಗಲೇ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮೂವರು ಪರೀಕ್ಷಾ ‌ಮೇಲ್ವಿಚಾರಕಿಯರು, ಮೂವರು ಅಭ್ಯರ್ಥಿಗಳು ಹಾಗೂ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿಯನ್ನು ಬಂಧಿಸಿದ್ದಾರೆ.

ಶಾಸಕರೊಂದಿಗೆ ಕಾರಿನಲ್ಲಿ ನಗರದ ರಾಮಮಂದಿರ ಬಳಿ ಹೊರಟಿದ್ದಾಗ ಸಿಐಡಿ ಪೊಲೀಸರು ಗನ್ ಮ್ಯಾನ್ ಹಯ್ಯಾಳಿಯನ್ನು ವಶಕ್ಕೆ ಪಡೆದರು‌. ಬಂಧಿತ ಗನ್ ಮ್ಯಾನ್ ಹಯ್ಯಾಳಿ (ಅಯ್ಯಣ್ಣ) ದೇಸಾಯಿ ಪಿಎಸ್ಐ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಆಯ್ಕೆಯಾಗಿದ್ದ ಎಂದು ತಿಳಿದು ಬಂದಿದೆ.