ಮೈಸೂರು: ಮುಂದಿನ ಸಂಪುಟದಲ್ಲಿ ಬರ ತಾಲೂಕು ಘೋಷಣೆ ಮಾಡುತ್ತೇವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸದ್ಯಕ್ಕೆ 61 ತಾಲೂಕುಗಳು ಬರದ ಪಟ್ಟಿಗೆ ಸೇರಿವೆ. ಇನ್ನೂ 136 ತಾಲೂಕುಗಳ ಬರ ಅಧ್ಯಯನ ನಡೆಯುತ್ತಿದೆ. ಈ ಅಧ್ಯಯನದ ವರದಿ ಸೇರಿಸಿ ತೀರ್ಮಾನ ಮಾಡುತ್ತೇವೆ ಎಂದರು.
ಇನ್ನು ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಮಾತನಾಡಿ, ಇದು ಅಸಾಧ್ಯವಾದ ಮಾತು. ಈ ಯೋಚನೆ ಅವೈಜ್ಞಾನಿಕವಾಗಿದೆ ಎಂದರು.
ಒಂದೇ ಚುನಾವಣೆ ಹೇಗೆ ಸಾಧ್ಯ. ಕೆಲವೊಂದು ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಇರುತ್ತೆ. ಕೆಲವು ಕಡ ಅರ್ಧ ಸರ್ಕಾರ ನಡೆದಿರುತ್ತದೆ. ಇದು ಆಗದ ಕ್ರಮ. ಕರ್ನಾಟಕದ ಚುನಾವಣೆ ಫಲಿತಾಂಶದಿಂದ ಬಿಜೆಪಿ ಅವರು ದೃತಿಗೆಟ್ಟಿದ್ದಾರೆ. ಪ್ರಧಾನಿ ಮೋದಿ ಅವರು ಪ್ರಚಾರ ಮಾಡಿದ ಕಡೆ ಕಾಂಗ್ರೆಸ್ ಗೆದ್ದಿದೆ. ಅವರು ಬಂದು ಗಲ್ಲಿಗಲ್ಲಿಯಲ್ಲಿ ಪ್ರಚಾರ ಮಾಡಿದರು ನಮಗೆ 135 ಸ್ಥಾನ ಬಂದಿದೆ. ಇದೇ ಒತ್ತಡದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಹಿಂದೆ ಸಿದ್ದರಾಮಯ್ಯ ಬಿಜೆಪಿಗೆ ಸೇರಲು ಯತ್ನಿಸಿದ್ದರು ಎಂಬ ಹೆಚ್ಡಿ ಕುಮಾರಸ್ಚಾಮಿ ಆರೋಪ ವಿಚಾರವಾಗಿ ಮಾತನಾಡಿದ ಅವರು, ನನ್ನ ಹೆಣವು ಕೂಡ ಬಿಜೆಪಿಗೆ ಹೋಗಲ್ಲ. ಕೋಮುವಾದಿಗಳ ವಿರುದ್ಧ ನನ್ನ ಹೋರಾಟ ನಿರಂತರವಾಗಿ ಇರುತ್ತೆ. ಕೋಮುವಾದಿಗಳ ಜೊತೆ ನಾನು ಎಂದಿಗೂ ರಾಜಿಯಾಗುವುದಿಲ್ಲ. ನಾನು ಬಿಜೆಪಿಗೆ ಹೋಗುತ್ತೇನೆ ಅಂದರೇ ಯಾರಾದರೂ ನಂಬುತ್ತಾರಾ? ಯಾರನ್ನೋ ಯಾವುದೋ ಸಂದರ್ಭದಲ್ಲಿ ಭೇಟಿ ಮಾಡಿರುತ್ತೇವೆ. ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ್ದೆ, ಈ ಹಿಂದೆ ಯಾವುದೊ ಸಂದರ್ಭದಲ್ಲಿ ಎಲ್ ಕೆ ಅಡ್ವಾಣಿ ಅವರನ್ನು ಭೇಟಿ ಮಾಡಿದ್ದೆ. ಅದಕ್ಕೆಲ್ಲಾ ಈ ಅರ್ಥ ಕಟ್ಟುವುದಕ್ಕೆ ಆಗುತ್ತಾ ಎಂದು ಸಮರ್ಥಿಸಿಕೊಂಡರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.