ಯಾದಗಿರಿ: ವಿವಾಹ ನಿಶ್ಚಯವಾಗಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಮುದ್ನಾಳ್ ತಾಂಡಾ ನಿವಾಸಿ ಸವಿತಾ ರಾಥೋಡ್(35) ಎಂದು ಗುರುತಿಸಲಾಗಿದೆ. ಸವಿತಾ ಅವರಿಗೆ ಇತ್ತೀಚೆಗಷ್ಟೇ ನಿಶ್ಚಿತಾರ್ಥ ನೆರವೇರಿತ್ತು ಮತ್ತು ಕೆಲವೇ ದಿನಗಳಲ್ಲಿ ವಿವಾಹಕ್ಕೆ ದಿನವನ್ನು ನಿಗದಿಪಡಿಸಲಾಗಿತ್ತು.
ಪೊಲೀಸರು ಒಬ್ಬ ಶಂಕಿತ ಸಚಿನ್ ಎಂಬಾತನನ್ನು ಕಸ್ಟಡಿಗೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಇದು ಸಾಮೂಹಿಕ ಅತ್ಯಾಚಾರದ ಪ್ರಕರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸೆಪ್ಟೆಂಬರ್ 9 ರಂದು ಸಂತ್ರಸ್ತೆ ಕಂಚಗಾರಹಳ್ಳಿ ಕ್ರಾಸ್ನಲ್ಲಿರುವ ತಮ್ಮ ಜಮೀನಿಗೆ ಹೋಗಿದ್ದ ವೇಳೆ ಘಟನೆ ನಡೆದಿದೆ.
ಅತ್ಯಾಚಾರ ಎಸಗಿರುವ ಆರೋಪಿಗಳು ಸವಿತಾಳ ಎದೆ ಮತ್ತು ಕಿವಿಯ ಮೇಲೆ ಚಾಕುವಿನಿಂದ ಇರಿದಿದ್ದಾರೆ. ಜಮೀನಿನಲ್ಲೇ ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಇದನ್ನು ಕಂಡ ಗ್ರಾಮಸ್ಥರು ಆಕೆಯನ್ನು ಕೂಡಲೇ ಕಲಬುರಗಿಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಆಕೆ ಸಾವಿಗೀಡಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಸವಿತಾ ಅನಾಥೆಯಾಗಿದ್ದು, ವಿಶೇಷಚೇತನ ಸಹೋದರನೊಂದಿಗೆ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.