ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಮಂಡ್ಯದಲ್ಲಿ ಜೆಡಿಎಸ್ ಗೆಲ್ಲುತ್ತದೆ. ಸುಮಲತಾ ಅವರಿಗೆ ಬೆಂಗಳೂರಿನ ಭಾಗದಲ್ಲಿ ಅವಕಾಶ ಮಾಡಿಕೊಡ್ತಾರೆ ಎಂದು ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಎಂದು ತಿಳಿಸಿದರು.
ಲೋಕಸಭಾ ಚುನಾವಣೆಗೆ ಜೆಡಿಎಸ್ – ಬಿಜೆಪಿ ಮೈತ್ರಿ ವಿಚಾರವಾಗಿ ಮಾತನಾಡಿದ ಕೆ.ಟಿ.ಶ್ರೀಕಂಠೇಗೌಡ, ಮೈತ್ರಿ ಬಗ್ಗೆ ಈಗಾಗಲೇ ಚರ್ಚೆಯಾಗಿದೆ, ದೇವೇಗೌಡ ಅವರೇ ಸಭೆಯಲ್ಲಿ ಮೈತ್ರಿ ಸುಳಿವನ್ನು ಕೊಟ್ಟಿದ್ದಾರೆ. ಈ ಹಿಂದೆಯೇ ಬಿಜೆಪಿ ಜೊತೆ ಸರ್ಕಾರವನ್ನು ಕೂಡ ಮಾಡಿದ್ದೇವೆ. ಇಂದಿನ ಕಾಂಗ್ರೆಸ್ ನಡೆ ಕಂಡು ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಾಗುವ ಬಗ್ಗೆ ಜನಾಭಿಪ್ರಾಯ ಇದೆ ಎಂದು ಹೇಳಿದರು.
ಜೆಡಿಎಸ್ ಸಮಾವೇಶದಲ್ಲಿ ಜೆಡಿಎಸ್ ಕಾರ್ಯಕರ್ತರು ಬೆಂಬಲ ಕೊಟ್ಟಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆ ಅಷ್ಟೆ ಅಲ್ಲದೇ ಮುಂದಿನ ಎಲ್ಲಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ನಿಶ್ಚಯವಾಗಿದೆ. ಹಾಸನ-ಮಂಡ್ಯ ಸೇರಿ 7 ಕ್ಷೇತ್ರ ಕೇಳಿದ್ದೇವೆ. ಅಂತಿಮವಾಗಿ ಬಿಜೆಪಿ-ಜೆಡಿಎಸ್ ವರಿಷ್ಠರು ತಿರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಮಂಡ್ಯದಲ್ಲಿ ಸಂಸದೆ ಸುಮಲತಾ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾವು ಮಂಡ್ಯ ಕೇಳಿದ್ದೇವೆ ಅವರಿಗೆ ಬೇರೆ ಕಡೆ ಅವಕಾಶ ಕೊಡ್ತಾರೆ. ಸುಮಲತಾ ಸ್ಪರ್ಧೆ ಬಗ್ಗೆ ವರಿಷ್ಠರು ತಿರ್ಮಾನ. ಚುನಾವಣೆಗೆ ನಿಲ್ಲುವುದು ಪ್ರತಿಯೊಬ್ಬರ ಹಕ್ಕು ಅವರಿಗೆ ಬಿಟ್ಟ ವಿಚಾರ. ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದಾರೆ ಅವರ ತೀರ್ಮಾನಕ್ಕೆ ಬದ್ದರಾಗಿರುತ್ತಾರೆ ಎಂದರು.
ಕಾಂಗ್ರೆಸ್ ಕೊಟ್ಟ ಮಾತನ್ನು ಯಾವತ್ತು ಉಳಿಸಿಕೊಂಡಿಲ್ಲ. ದೇವೇಗೌಡರು ಪ್ರಧಾನಮಂತ್ರಿಯಾಗಿದ್ದಾಗ ಬೆಂಬಲ ಕೊಟ್ಟಿದ್ದು, ಕಾಂಗ್ರೆಸ್ 10 ತಿಂಗಳ ಬಳಿಕ ಕೆಳಗಿಳಿಸಿದ್ದು ಅವರೆ. ರಾಜ್ಯದಲ್ಲಿ ನೀವೇ ಸರ್ಕಾರ ನಡೆಸಿ ಅಂತ ಹೇಳಿ ಶಾಸಕರನ್ನ ವಾಪಸ್ ಕಳಿಸಿದರು. ಸುಮಲತಾ ಅವರು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದಾಗ ಕಾಂಗ್ರೆಸ್ ನವರು ನಾವು ಗೆಲ್ಲಿಸಿದ್ದು ತಪ್ಪಾಯ್ತು ಎಂದು ಹೇಳಿದ್ದರು ಎಂದು ತಿಳಿಸಿದರು.
ತುಮಕೂರಿನಲ್ಲಿ ದೇವೇಗೌಡರನ್ನು ಸೋಲಿಸಿದ್ದು ಕಾಂಗ್ರೆಸ್. ಮಂಡ್ಯದಲ್ಲಿ ನಿಖಿಲ್ ಸೋಲಿಸಿದ್ದು ಕೂಡ ಕಾಂಗ್ರೆಸ್ ನವರೇ. ಕಾಂಗ್ರೆಸ್ ನವರು ಹೊಂದಾಣಿಕೆ ವಿಶ್ವಾಸವನ್ನು ಉಳಿಸಿಕೊಂಡಿಲ್ಲ. ಕೊಟ್ಟ ಮಾತಿನಂತೆ ಕಾಂಗ್ರೆಸ್ ಯಾವ ಸಂದರ್ಭದಲ್ಲು ನಡೆದಿಲ್ಲ. ಹೊಂದಾಣಿಕೆ ವೈಫಲ್ಯತೆ ಕಾಂಗ್ರೆಸ್ ಗೆ ಸಲ್ಲುತ್ತೆ ಎಂದರು.
ಎಂಪಿ ಚುನಾವಣೆಯಲ್ಲಿ ಕೆಟಿಎಸ್ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಶಿಕ್ಷಕ ಕ್ಷೇತ್ರಕ್ಕೆ ಹೋಗಲು ನಮ್ಮ ನಾಯಕರು ಸೂಚನೆ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ. ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇನೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.