ಬೆಂಗಳೂರು: ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು , ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆ.ಆರ್.ಎಸ್.ಹಾಗೂ ಕಬಿನಿಯಿಂದ 5000 ಕ್ಯೂಸೆಕ್ಸ್ ನೀರನ್ನು ಬಿಳಿಗುಂಡ್ಲುವಿನಿಂದ ಹರಿಸುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿಗಳು, ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀ ಲಿಸುವಂತೆ ಕೋರಿದ್ದಾರಲ್ಲದೆ, ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕಾಪಾಡಲು ಮನವಿ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲ್ಲೂಕುಗಳು ಮುಂಗಾರು ವೈಫಲ್ಯ ದಿಂದ ತೀವ್ರ ಬರಕ್ಕೆ ತುತ್ತಾಗಿವೆ ಎಂದು ವಿವರಿಸಿದ್ದಾರೆ.
ಜೂನ್ ಮಾಹೆಯಿಂದ ಸೆಪ್ಟೆಂಬರ್ ಮಧ್ಯದವರೆಗೂ 92 ದಿನಗಳ ಕಾಲ 100 ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಂಡಿದ್ದು, ಇದು ಹಿಂದೆ 1987-88, 2002-03, 2012-13, 2016-17 ಹಾಗೂ 2017-18 ರ ಬರಪರಿಸ್ಥಿತಿಯಲ್ಲಿ ಬಳಕೆಯಾದ ನೀರಿಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ತಮಿಳುನಾಡು ಭತ್ತವನ್ನು ವ್ಯಾಪಕವಾಗಿ ಬೆಳೆಯುತ್ತಿದೆ ಎಂದು ಪಾತ್ರದಲ್ಲಿ ಮುಖ್ಯಮಂತ್ರಿಗಳು ವಿವರಿಸಿದ್ದಾರೆ.
ಸೆಪ್ಟೆಂಬರ್ 12 ಹಾಗೂ 24 ವರೆಗೆ ಐಎಂಡಿ ಹವಾಮಾನ ಮುನ್ಸೂಚನೆಯಂತೆ ಮಳೆಯಾಗುವ ಲಕ್ಷಣಗಳಿಲ್ಲ. ಮೆಟ್ಟೂರು ಜಲಾಶಯದಲ್ಲಿ ಡಿ: 12.09.2023 ರಂದು 24.233 ಟಿಎಂಸಿ ಸಂಗ್ರಹವಿದ್ದು ( live storage) ಪ್ರಸ್ತುತ ಬಿಡುಗಡೆಯಾಗಿರುವ ನೀರನ್ನು ಪರಿಗಣಿಸಿದರೆ, ತಮಿಳುನಾಡಿನ ಅವಶ್ಯಕತೆ ಯನ್ನು ಪೂರೈಸಲು ಸಾಕಾಗುವಷ್ಟು ನೀರು ಲಭ್ಯವಿದೆ. .
ಕರ್ನಾಟಕದ ಬೆಳೆಗಳ ರಕ್ಷಣೆಗೆ 70 ಟಿಎಂಸಿ, ಕುಡಿಯುವ ನೀರಿಗೆ 33 ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ. ನಮ್ಮ ಸಂಗ್ರಹ 53 ಟಿಎಂಸಿ ಮಾತ್ರವಿದ್ದು, ನಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಸಂಗ್ರಹ ಸಾಕಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಪಾತ್ರದಲ್ಲಿ ವಿವರಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.