ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರ ರಾಜಕೀಯ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗೆ ಪತ್ರ ಬರೆಯುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ತಿಳಿಸಿದ್ದಾರೆ.
ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಇಂದಿರಾ ಕಾಂಗ್ರೆಸ್ ಭವನದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಪ್ರಜಾಪ್ರಭುತ್ವ ದಿನ ಮತ್ತು ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿ ದೊರೆತಿದೆ. ವಿಧಾನಸಭೆ, ಪಾರ್ಲಿಮೆಂಟಿನಲ್ಲಿ ರಾಜಕೀಯ ಮೀಸಲಾತಿ ಜಾರಿಗೊಳಿಸುವಂತೆ ಕೂಗು, ಹೋರಾಟ ನಿರಂತರವಾಗಿ ನಡೆಯುತ್ತಿದೆ. ಆದರೆ, ಮಹಿಳೆಯರ ಮೀಸಲಾತಿ ಜಾರಿ ಮರೀಚಿಕೆಯಾಗಿದೆ ಎಂದು ನುಡಿದರು.
ಕೇಂದ್ರದಲ್ಲಿ ಬಿಜೆಪಿ ಬಹುಮತದ ಸರ್ಕಾರವಿದೆ. ಮನಸ್ಸು ಮಾಡಿದರೆ ಮಹಿಳಾ ಮೀಸಲಾತಿ ಜಾರಿ ಮಾಡುವುದು ಕಷ್ಟವಲ್ಲ. ಆದರೆ, ತಡ ಮಾಡುತ್ತಿದೆ. ಶೇ. 30 ಮೀಸಲಾತಿ ನೀಡುವ ಮೂಲಕ ಬಾಬಾ ಸಾಹೇಬರ ಆಶಯವನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ರಾಜಕೀಯ ಸಮಾನತೆ ಸಿಕ್ಕಿದರೆ ಮಾತ್ರ ಮಹಿಳೆಯರ ಮುಂದುವರಿಯಲು ಸಾಧ್ಯ. ಶೇ. 50 ಮತದಾನ ಮಾಡುವ ಮಹಿಳೆಗೆ ಶಕ್ತಿ ತುಂಬಬೇಕು. ಎಲ್ಲ ಪಕ್ಷಗಳ ನಾಯಕರು ರಾಜಕೀಯವನ್ನು ಬಿಟ್ಟು ಮಹಿಳಾ ಮೀಸಲಾತಿ ಜಾರಿಗೆ ಸಹಮತ ವ್ಯಕ್ತಪಡಿಸಬೇಕು ಎಂದು ಹೇಳಿದರು.
ಮಹಿಳಾ ಕಾಂಗ್ರೆಸ್ ಸ್ಥಾಪನೆಯಾಗಿ 4 ದಶಕಗಳನ್ನು ಪೂರೈಸಿದೆ. ಸುಚೇತಾ ಕೃಪಲಾನಿ ಮೊದಲ ಅಧ್ಯಕ್ಷರಾಗಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಮಹಿಳಾ ಕಾಂಗ್ರೆಸ್ಗೆ ಒತ್ತು ಕೊಟ್ಟಿದ್ದರು. ಇವತ್ತು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ದೇಶದ ಮಹಿಳೆಯರ ಕಷ್ಟಗಳಿಗೆ ದನಿಯಾಗಿದೆ ಎಂದು ತಿಳಿಸಿದರು.
ಮಹಿಳಾ ಕಾಂಗ್ರೆಸ್ ಚಳವಳಿ, ಹೋರಾಟದ ಸಂಕೇತವಾಗಿದೆ. ಮಹಿಳೆಯರ ಶಿಕ್ಷಣ, ಹಕ್ಕುಗಳನ್ನು ಕೊಡಿಸಲು ಬದ್ಧವಾಗಿದೆ. ದೌರ್ಜನ್ಯ, ದಬ್ಬಾಳಿಕೆಯ ವಿರುದ್ಧ ಹೋರಾಡುವ ಸಂಕಲ್ಪ ತೊಟ್ಟಿದೆ ಎಂದು ಹೇಳಿದರು.
ಸಂವಿಧಾನ ಪೀಠಿಕೆ ಓದಿದ ಬಳಿಕ ಎಲ್ಲರಿಗೂ ಸಿಹಿ ವಿತರಿಸಲಾಯಿತು.
ನಗರ ಅಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್, ಸಿ.ಬಸವೇಗೌಡ, ಲತಾಸಿದ್ಧಶೆಟ್ಟಿ, ಪುಷ್ಪವಲ್ಲಿ, ಪುಷ್ಪಾಲತಾ ಚಿಕ್ಕಣ್ಣ, ಮಾಜಿ ಜಿ.ಪ ಸದಸ್ಯೆ ಸುಧಾ ಮಹದೇವಯ್ಯ ಮುಂತಾದವರು ಭಾಗವಹಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.