ಮನೆ ಸುದ್ದಿ ಜಾಲ ಜಮ್ಮು ಕಾಶ್ಮೀರ: ಎನ್​ಕೌಂಟರ್‌ ವೇಳೆ ನಾಪತ್ತೆಯಾಗಿದ್ದ ಯೋಧನ ಮೃತದೇಹ ಪತ್ತೆ

ಜಮ್ಮು ಕಾಶ್ಮೀರ: ಎನ್​ಕೌಂಟರ್‌ ವೇಳೆ ನಾಪತ್ತೆಯಾಗಿದ್ದ ಯೋಧನ ಮೃತದೇಹ ಪತ್ತೆ

0

 ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಯೋಧನ ಮೃತದೇಹ ಪತ್ತೆಯಾಗಿದೆ. ಇನ್ನೊಂದೆಡೆ, ಸಿಆರ್​ಪಿಎಫ್​ ವಾಹನದ ಮೇಲೆ ಶಸ್ತ್ರಸಜ್ಜಿತ ಭಯೋತ್ಪಾದಕ ದಾಳಿ ನಡೆಸಿದ್ದಾನೆ.

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಕಳೆದ ಆರು ದಿನಗಳಿಂದ ಅನಂತ್​ನಾಗ್​ ಜಿಲ್ಲೆಯ ಕೋಕರ್​ನಾಗ್​ ಪ್ರದೇಶದಲ್ಲಿ ಭಾರತೀಯ ಸೇನೆ ಹಾಗೂ ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್​ಕೌಂಟರ್​ನಲ್ಲಿ ಸೆಪ್ಟೆಂಬರ್​ 13ರಂದು ನಾಪತ್ತೆಯಾಗಿದ್ದ ಪ್ರದೀಪ್​ ಸಿಂಗ್​ (27) ಯೋಧ ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಇವರು ಉಗ್ರ ದಮನ ಜಂಟಿ ಕಾರ್ಯಾಚರಣೆಯ ಭಾಗವಾಗಿದ್ದರು. ಸೋಮವಾರ ಸಂಜೆ 5 ಗಂಟೆಗೆ ಮೃತದೇಹ ದೊರೆತಿದೆ.

ಶಸ್ತ್ರಸಜ್ಜಿತ ಭಯೋತ್ಪಾದಕನೊಬ್ಬ ಶ್ರೀನಗರ ಜಿಲ್ಲೆಯ ಖನ್ಯಾರ್​ ಪ್ರದೇಶದಲ್ಲಿ ಸಿಆರ್​ಪಿಎಫ್​ನ ಬುಲೆಟ್​ ಪ್ರೂಫ್​ ವಾಹನವೊಂದರ ಮೇಲೆ ದಾಳಿ ನಡೆಸಿದ್ದಾನೆ. ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ದಾಳಿಯನ್ನು ಹಿಮ್ಮೆಟ್ಟಿಸಿದರು ಎಂದು ಶ್ರೀನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ಶ್ರೀನಗರ ಪೊಲೀಸರು ಅಧಿಕೃತ ಎಕ್ಸ್​ ಖಾತೆಯಲ್ಲಿ (ಹಿಂದಿನ ಟ್ವಿಟರ್​) ಈ ಕುರಿತು ಪೋಸ್ಟ್​ ಹಂಚಿಕೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಗಾಯ ಅಥವಾ ಪ್ರಾಣಹಾನಿ ವರದಿಯಾಗಿಲ್ಲ. ಸಿಆರ್‌ಪಿಎಫ್​ ವಾಹನದ ಮೇಲೆ ಗುಂಡು ಹಾರಿಸಿದ ಬಳಿಕ ಭಯೋತ್ಪಾದಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ.