ಮನೆ ಮನರಂಜನೆ ಕಾವೇರಿ ಹೋರಾಟಕ್ಕೆ ಬೆಂಬಲಿಸದ ಸ್ಯಾಂಡಲ್ ವುಡ್ ನಟರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಧಿಕ್ಕಾರದ ಪೋಸ್ಟ್

ಕಾವೇರಿ ಹೋರಾಟಕ್ಕೆ ಬೆಂಬಲಿಸದ ಸ್ಯಾಂಡಲ್ ವುಡ್ ನಟರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಧಿಕ್ಕಾರದ ಪೋಸ್ಟ್

0

ಮಂಡ್ಯ: ಕಾವೇರಿ ಹೋರಾಟಕ್ಕೆ ಬೆಂಬಲ ನೀಡದ ಹಿನ್ನೆಲೆ ಚಿತ್ರ ನಟರ ವಿರುದ್ಧ ಮಂಡ್ಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಸೋಷಿಯಲ್ ಮೀಡಿಯಾ ಮೂಲಕ ಅನ್ನದಾತರ ರೋಷಾವೇಷವನ್ನು ವ್ಯಕ್ತಪಡಿಸಲಾಗಿದೆ.

ಕಾವೇರಿ ಬಗ್ಗೆ ಧ್ವನಿ ಎತ್ತದ ಕನ್ನಡ ಚಲನಚಿತ್ರ ನಟರಿಗೆ ಧಿಕ್ಕಾರ ಧಿಕ್ಕಾರ ಎಂದು ಫೇಸ್ ಬುಕ್, ವಾಟ್ಸ್ ಆಪ್ ಸೇರಿದಂತೆ ವಿವಿಧ ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಹಾಕಲಾಗಿದೆ.

ಕಾವೇರಿ ಬಗ್ಗೆ ಧ್ವನಿ ಎತ್ತದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ರೈತರು ಪ್ರಮುಖ ನಟರ ಫೋಟೋ ಹಾಕಿ, ನಟರ ಬಾಯಿಗೆ ಪಟ್ಟಿ ಅಂಟಿಸಿರುವ ಫೋಟೋ ಹಾಕಿ ಕಿಡಿಕಾರಿದ್ದಾರೆ.

ಕನ್ನಡ ನಾಡಿನ ರೈತರಿಗೆ ಅನ್ಯಾಯ ಆದಾಗ ಮುನ್ನುಗ್ಗಿ ಬರುವ ಶಕ್ತಿ ಡಾ.ರಾಜ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಅವರಿಗಿತ್ತು ಎಂದು ರೈತರು ಸ್ಮರಿಸಿದ್ದಾರೆ.

ಇಂದು ಯಾವ ನಟರೂ ಕಾವೇರಿ ಬಗ್ಗೆ ಧ್ವನಿ ಎತ್ತದೇ ಇರುವುದು ಬಹಳ ನೋವಿನ ಸಂಗತಿ. ನಮ್ಮಿಂದ ನಟರೇ ಹೊರತು, ನಟರಿಂದ ನಾವಲ್ಲ ಅನ್ನೋ ಸತ್ಯ ಅರಿಯಬೇಕು. ಇಂತಹ ನಿರ್ಲಕ್ಷ್ಯ ನಟರನ್ನ ನಂಬದೆ ಎಲ್ಲಾ ಕನ್ನಡಿಗರು ರೈತರ ಪರ ನಿಲ್ಲಬೇಕು. ರೈತ ಉಳಿದರೆ ನಾವೆಲ್ಲ, ರೈತನಿಲ್ಲದೆ ಜಗವಿಲ್ಲ. ನಮ್ಮ ನಿರಂತರ ಹೋರಾಟ ಕಾವೇರಿಗಾಗಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ನಲ್ಲಿ ಬರೆಯಲಾಗಿದೆ.