ನವದೆಹಲಿ: ಹೊಸ ಸಂಸತ್ ಭವನದ ಉದ್ಘಾಟನೆಯ ದಿನದಂದು ಶಾಸಕರಿಗೆ ನೀಡಲಾದ ಸಂವಿಧಾನದ ಹೊಸ ಪ್ರತಿಗಳ ಮುನ್ನುಡಿಯಲ್ಲಿ “ಜಾತ್ಯತೀತ” ಮತ್ತು “ಸಮಾಜವಾದಿ” ಪದಗಳು ಕಣ್ಮರೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಆರೋಪಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಚೌಧರಿ ಇಂದು ನಾವು ನೂತನ ಸಂಸತ್ ಭವನದಲ್ಲಿ ನೀಡಿದ್ದ ಸಂವಿಧಾನದ ಮುನ್ನುಡಿಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಪದಗಳಿಲ್ಲ, ಈ ಎರಡು ಪದಗಳು ಸಂವಿಧಾನದಲ್ಲಿ ಇಲ್ಲದಿದ್ದಲ್ಲಿ ಅದು ಆತಂಕಕಾರಿ ಸಂಗತಿಯಾಗಿದೆ. ಸರ್ಕಾರವು ಈ ಬದಲಾವಣೆಯನ್ನು ಅತ್ಯಂತ “ಬುದ್ಧಿವಂತಿಕೆಯಿಂದ” ಮಾಡಿದೆ ಮತ್ತು ಅವರ ಉದ್ದೇಶಗಳು “ಸಮಸ್ಯೆ”ಉಂಟುಮಾಡುವಂತದ್ದಾಗಿದೆ ಎಂದ ಅವರು ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲು ಬಯಸಿದ್ದೆ. ಆದರೆ ಅದಕ್ಕೆ ಅವಕಾಶ ಸಿಗಲಿಲ್ಲ ಎಂದು ಚೌಧರಿ ಹೇಳಿದ್ದಾರೆ.
ಮಂಗಳವಾರ ಮುಂಜಾನೆ, ಕಾಂಗ್ರೆಸ್ ನಾಯಕರು ಸಂಸತ್ತಿನಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವ ವೇಳೆ ಈ ವಿಚಾರ ಗಮನಕ್ಕೆ ಬಂದಿದ್ದು ಅಲ್ಲದೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ, “ಪೀಠಿಕೆಯಲ್ಲಿ ‘ಸಮಾಜವಾದಿ ಮತ್ತು ಜಾತ್ಯತೀತ’ ಪದಗಳು ಇರಲಿಲ್ಲ” ಎಂದು ಹೇಳಿದರು.
ಮಂಗಳವಾರ ನೂತನ ಸಂಸತ್ ಭವನದ ಉದ್ಘಾಟನೆಯ ದಿನದಂದು ಸಂಸತ್ತಿನ ಸದಸ್ಯರು ಭಾರತದ ಸಂವಿಧಾನದ ಪ್ರತಿ, ಸಂಸತ್ತಿಗೆ ಸಂಬಂಧಿಸಿದ ಪುಸ್ತಕಗಳು, ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿಯನ್ನು ಸ್ವೀಕರಿಸಿದ್ದರು.
ನೂತನ ಸಂಸತ್ ಸಂಕೀರ್ಣವನ್ನು ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಎರಡನೇ ದಿನದ ವಿಶೇಷ ಸಂಸತ್ ಅಧಿವೇಶನ ಮಂಗಳವಾರ ಹೊಸ ಕಟ್ಟಡದಲ್ಲಿ ನಡೆಯಿತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.