ಮನೆ ರಾಜ್ಯ ಕಾವೇರಿ ವಿವಾದ: ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ- ದರ್ಶನ್ ತೂಗುದೀಪ

ಕಾವೇರಿ ವಿವಾದ: ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ- ದರ್ಶನ್ ತೂಗುದೀಪ

0

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆಯಾಗಿದ್ದು, ಈ ಬಗ್ಗೆ ರಾಜ್ಯ ಕೇಂದ್ರದ ಮಧ್ಯ ಪ್ರವೇಶಕ್ಕೆ ಆಗ್ರಹಿಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ದೆಹಲಿ ತಲುಪಿದ್ದಾರೆ.

ಕಾವೇರಿ ನೀರು ವಿವಾದದ ವಿಚಾರವಾಗಿ ನೂರಾರು ರೈತರು ಹಾಗೂ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿವೆ. ಈ ನಡುವೆ ಈ ವಿವಾದದ ಬಗ್ಗೆ ಧ್ವನಿ ಎತ್ತಿಲ್ಲ ಎನ್ನುವ ಕಾರಣಕ್ಕೆ ಕೆಲವರು ಸ್ಯಾಂಡಲ್‌ ವುಡ್ ನಟರ ವಿರುದ್ಧ ಸೋಶಿಯಲ್‌ ಮೀಡಿಯಾದಲ್ಲಿ ಆಕ್ರೋಶ ಪಡಿಸಿದ್ದಾರೆ.

ಇದೀಗ ಕಾವೇರಿ ನಮ್ಮದು ಎಂದು ನಟ ದರ್ಶನ್‌ ಕಾವೇರಿ ನೀರಿನ ವಿವಾದ ಕುರಿತು ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ” ಎಂದಿದ್ದಾರೆ.

ನಟನ ಟ್ವೀಟ್‌ ಗೆ ಅನೇಕರು ಬೆಂಬಲ ನೀಡಿ, ಅವರ ನಡೆಯನ್ನು ಶ್ಲಾಘಿಸಿದ್ದಾರೆ.