ಮನೆ ರಾಜ್ಯ ವಂಚನೆ ಪ್ರಕರಣ: ಅಭಿನವ ಹಾಲವೀರಪ್ಪ ಸ್ವಾಮೀಜಿಯನ್ನು ಮಠಕ್ಕೆ ಕರೆತಂದು ಮಹಜರು ನಡೆಸಿದ ಸಿಸಿಬಿ ಪೊಲೀಸರು

ವಂಚನೆ ಪ್ರಕರಣ: ಅಭಿನವ ಹಾಲವೀರಪ್ಪ ಸ್ವಾಮೀಜಿಯನ್ನು ಮಠಕ್ಕೆ ಕರೆತಂದು ಮಹಜರು ನಡೆಸಿದ ಸಿಸಿಬಿ ಪೊಲೀಸರು

0

ಬೆಂಗಳೂರು: ಬಿಜೆಪಿ ಟಿಕೆಟ್‌ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿರುವ ಅಭಿನವ ಹಾಲವೀರಪ್ಪ ಸ್ವಾಮೀಜಿ ಅವರನ್ನು ವಿಜಯನಗರ ಜಿಲ್ಲೆಯ ಹಿರೇ ಹಡಗಲಿ ಹಾಲಸ್ವಾಮಿ ಮಠಕ್ಕೆ ಬುಧವಾರ ಕರೆತಂದು ಮಠದಲ್ಲಿ ಮಹಜರು ನಡೆಸಲಾಯಿತು.

ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿದ ಚೈತ್ರಾ ಕುಂದಾಪುರ ಒಳಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿ ಉಪಸ್ಥಿತಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಮಠದಲ್ಲಿ ಮಹಜರು ನಡೆಸಲಾಯಿತು.

ನಂತರ ಸಿಸಿಬಿ ಪೊಲೀಸರು ಅವರನ್ನು ಮಧ್ಯರಾತ್ರಿ ವಾಪಸ್ ಕರೆದೊಯ್ದರು.