ಬೆಂಗಳೂರು: ವೈಯಾಲಿಕಾವಲ್ ಠಾಣೆ ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು, ವ್ಯಕ್ತಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಆರೋಪ ಕೇಳಿ ಬಂದಿದೆ.
ತಲಘಟ್ಟಪುರದ ನಾಗರಾಜ್(47) ಮೃತಪಟ್ಟವರು.
ಸನಾವುಲ್ಲಾ ಎಂಬಾ ತನ ಒಡೆತನದಲ್ಲಿರುವ ಎನ್ ವೇರ್ ವೆುಂಟ್ ಪೊಲೂಷನ್ ಪ್ರಾಜೆಕ್ಟ್ ಕಂಪನಿಯಲ್ಲಿ ನಾಗರಾಜ್ ಕೆಲಸ ಮಾಡುತ್ತಿದ್ದ. ಈ ಕಂಪನಿಯ ಹೆಸರಿನಲ್ಲಿ ಹಣ ಪಡೆದು ವಂಚಿಸಿರುವುದಾಗಿ ನಟರಾಜ್ ಎಂಬುವವರು ವೈಯಾಲಿಕಾವಲ್ ಠಾಣೆಗೆ ಇತ್ತೀಚೆಗೆ ದೂರು ನೀಡಿದ್ದರು. ಆದರೆ, ಹಲವು ಜನರಿಂದ ಹಣ ಪಡೆದು ವಂಚಿಸಿರುವ ಕಂಪನಿ ಮಾಲೀಕ ಸನಾವುಲ್ಲಾ ಬದಲಾಗಿ ನಾಗರಾಜ್ ರನ್ನು ಪೊಲೀಸರು ಕರೆದೊಯ್ದು ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಇದರಿಂದ ನೊಂದ ನಾಗರಾಜ್ 2 ಪುಟ ಡೆತ್ನೋಟ್ ಬರೆದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಾಗರಾಜ್ ಅವರ ಪತ್ನಿ ವಿನುತಾ ಕೊಟ್ಟ ದೂರಿನ ಆಧಾರದ ಮೇಲೆ ಸನಾವುಲ್ಲಾ, ನಟರಾಜ್, ಈರೇಗೌಡ, ವೈಯಾಲಿಕಾವಾಲ್ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಹಾಗೂ ಹೆಣ್ಣೂರು ಪೊಲೀಸ್ ಸಿಬ್ಬಂದಿ ಶಿವಕುಮಾರ್ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಖಾಸಗಿ ಕಂಪನಿಯಲ್ಲಿ ಟೀಮ್ ಲೀಡರ್ ಆಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಪತಿ ನಾಗರಾಜ್ ಪ್ರತಿಷ್ಠಿತ ಕಂಪನಿಯಲ್ಲಿ ಟೆಕ್ನಿಷಿಯನ್ ಕೆಲಸ ಮಾಡಿ ಕಳೆದ 2 ವರ್ಷಗಳ ಹಿಂದೆ ವಾಲೆಂಟರಿ ರಿಟೈರ್ವೆುಂಟ್ ಪಡೆದಿದ್ದರು. ಆತ್ಮಹತ್ಯೆಗೂ ಮುನ್ನ ನನ್ನ ವಾಟ್ಸ್ಆ್ಯಪ್ಗೆ ಡೆತ್ನೋಟ್ ಕಳಿಸಿದ್ದರು. ನನ್ನ ಸಾವಿಗೆ ಈ ಐವರು ಕಾರಣ ಎಂದು ತಿಳಿಸಿದ್ದಾರೆ.
ಹೆಣ್ಣೂರು ಪೊಲೀಸ್ ಠಾಣೆಯ ಶಿವಕುಮಾರ್ ಗೆ 8 ಲಕ್ಷ ರೂ. ನೀಡಿದ್ದೇನೆ. ದೇವಾರಾಜ್ ಎಂಬುವವರಿಗೆ 9 ಲಕ್ಷ ರೂ. ಕೊಡಬೇಕು. ದಯವಿಟ್ಟು ನನ್ನನ್ನು ಕ್ಷಮಿಸು ಎಂದು ಹೇಳಿದ್ದರು. ಹೀಗಾಗಿ ನಾಗರಾಜ್ ಆತ್ಮಹತ್ಯೆಗೆ ಕಾರಣವಾದ ಐವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಎಫ್ ಐಆರ್ನಲ್ಲಿ ಉಲ್ಲೇಖೀಸಲಾಗಿದೆ.
ವೈಯಾಲಿಕಾವಲ್ ಪೊಲೀಸರು ಬೆಲ್ಟ್ ನಿಂದ ಹಲ್ಲೆ ನಡೆಸಿದ್ದಾರೆ. ಸಾಲದಕ್ಕೆ ಬ್ಯಾಟ್ ನಿಂದ ಬಡಿದು, ಶೂನಿಂದ ಒದ್ದಿದ್ದರು ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾನೆ. ವೈಯಾಲಿ ಕಾವಲ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್, ಇಪಿಪಿ ಕಂಪನಿ ಮಾಲೀಕ ಸನಾವುಲ್ಲಾ, ನಟರಾಜ್, ಎಂ.ಸಿ ಯೆರ್ರೆಗೌಡ ಹೆಸರನ್ನೂ ಉಲ್ಲೇಖೀಸಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.