ಮನೆ ಅಪರಾಧ ಟ್ಯ್ರಾಕ್ಟರ್ ಕಳ್ಳತನ ಮಾಡಿದ್ದ ವ್ಯಕ್ತಿಯ ಬಂಧನ

ಟ್ಯ್ರಾಕ್ಟರ್ ಕಳ್ಳತನ ಮಾಡಿದ್ದ ವ್ಯಕ್ತಿಯ ಬಂಧನ

0

ಹುಣಸೂರು: ಟ್ಯ್ರಾಕ್ಟರ್ ಕಳ್ಳತನ ಮಾಡಿದ್ದ ಓರ್ವನನ್ನು ಟ್ರೇಲರ್ ಸಹಿತ ಟ್ರ್ಯಾಕ್ಟರ್ ವಶಪಡಿಸಿಕೊಳ್ಳುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಕಳ್ಳನನ್ನು ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಪರಸನಹಳ್ಳಿಯ ಕಾರ್ತಿಕ್ ಬಂಧಿತ ಆರೋಪಿ.

ಘಟನೆಯ ವಿವರ:

ಹಾಸನ ಜಿಲ್ಲೆಯ ಜಗದೀಶ್ ಎಂಬವರು ಹುಣಸೂರು ತಾಲೂಕಿನ ತಿಪ್ಪಲಾಪುರ ಗ್ರಾಮದಲ್ಲಿ ಬಾಡಿಗೆಗೆ ಬಿಟ್ಟಿದ್ದ  ಟ್ರೇಲರ್ ಸಹಿತ ಟ್ಯ್ರಾಕ್ಟರ್ ಕಳ್ಳತನವಾಗಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್.ಪಿ.ಸೀಮಾ ಲಾಟ್ಕರ್ ಮಾರ್ಗದರ್ಶನದಲ್ಲಿ ಡಿವೈಎಸ್‌ ಪಿ ಮಹೇಶ್ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಸಿ.ವಿ.ರವಿ ಹಾಗೂ ಸಿಬ್ಬಂದಿಗಳ ತಂಡ ರಚಿಸಲಾಗಿತ್ತು.  ತನಿಖೆಯಲ್ಲಿ ಆರೋಪಿ ಕಾರ್ತಿಕ್ ಕಳ್ಳತನ ಮಾಡಿದ್ದನ್ನು ಪತ್ತೆ ಹಚ್ಚಿ ಹೆಚ್ಚಿನ ವಿಚಾರಣೆ ನಡೆಸಿದ ವೇಳೆ ಇದೇ ಆರೋಪಿ 2022ರ ಜುಲೈ 13ರಂದು ಕಟ್ಟೆಮಳಲವಾಡಿಯಲ್ಲೂ ಸಹ ಒಂದು ಟ್ಯ್ರಾಕ್ಟರ್ -ಟ್ರೇಲರ್ ಕಳ್ಳತನ ಮಾಡಿ, ಚನ್ನಪಟ್ಟಣ ತಾಲೂಕಿನ ನುಗ್ಗೆಹಳ್ಳಿಯಲ್ಲಿ ಮಾರಾಟ ಮಾಡಿದ್ದನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಎಸ್.ಐ.ಸಿದ್ದರಾಜು, ಎಎಸ್‌ ಐ ಅಂತೋಣಿಕ್ರೂಸ್, ಸಿಬ್ಬಂದಿಗಳಾದ ವಿಜಯರಘು, ಇಸ್ರಾರ್ ಅಹಮದ್, ಮೆಹರಾಜ್, ಇಮ್ರಾನ್ ಷರೀಫ್ ಬಾಗವಹಿಸಿದ್ದರು.