ಮನೆ ರಾಜ್ಯ ಮಂಡ್ಯ: ಕೆಆರ್ ಎಸ್ ಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ: ಕೆಆರ್ ಎಸ್ ಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

0

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಹಿನ್ನಲೆ  ಇಂದು ಮಾಜಿ ಮುಖ್ಯಮಂತ್ರಿ  ಹೆಚ್.ಡಿ.ಕುಮಾರಸ್ವಾಮಿ  ಕೆ.ಆರ್.ಎಸ್ ಅಣೆಕಟ್ಟೆಗೆ ಭೇಟಿ ನೀಡಿ ಅಣೆಕಟ್ಟೆಯಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ ವೀಕ್ಷಣೆ ಮಾಡಿದರು.

ಕೆಆರ್‌ ಎಸ್‌ ಅಣೆಕಟ್ಟೆಯ ವಾಸ್ತವ ಸ್ಥಿತಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಬಳಿಕ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾದರು. ಈ ವೇಳೆ  ನಿಖಿಲ್ ಕುಮಾರಸ್ವಾಮಿ, ಶಾಸಕ ಜಿ ಟಿ ದೇವೇಗೌಡ, ಮಾಜಿ ಶಾಸಕರಾದ  ಸಿ ಎಸ್ ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಸಾಥ್ ನೀಡಿದರು.