ವಕೀಲರನ್ನು ಅವರ ಧಾರ್ಮಿಕ ಹಿನ್ನೆಲೆ ಅಥವಾ ಇನ್ನಿತರ ಸಂಬಂಧಗಳ ಹಿನ್ನೆಲೆಯಲ್ಲಿ ಹೈಕೋರ್ಟ್ಗೆ ಹಾಜರಾಗದಂತೆ ತಡೆಯಲಾಗುತ್ತಿಲ್ಲ ಎಂಬುದನ್ನು ದೃಢೀಕರಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಣಿಪುರ ವಕೀಲರ ಸಂಘದ ಅಧ್ಯಕ್ಷರಿಗೆ ರಾಜ್ಯ ಹೈಕೋರ್ಟ್ ಸೂಚಿಸಿದೆ.
ಎಲ್ಲಾ ಸಮುದಾಯಗಳ ವಕೀಲರು ಹಾಜರಾಗಿದ್ದಾರೆ ಎಂಬುದನ್ನು ತೋರಿಸುವ ಹೇಳಿಕೆಯನ್ನು ಸಿದ್ಧಪಡಿಸಿ ಹೈಕೋರ್ಟ್ನ ಆದೇಶಗಳನ್ನು ಸಲ್ಲಿಸುವಂತೆ ಸಂಘದ ಅಧ್ಯಕ್ಷರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ತಿಳಿಸಿತು.
ರಾಜ್ಯದ ಆಡಳಿತದ ಪ್ರತಿಯೊಂದು ವಿವರವನ್ನು ಪರಿಶೀಲಿಸುವ ಉದ್ದೇಶ ಸುಪ್ರೀಂ ಕೋರ್ಟ್ಗೆ ಇಲ್ಲ ಎಂದು ಸಿಜೆಐ ಚಂದ್ರಚೂಡ್ ಸ್ಪಷ್ಟಪಡಿಸಿದ್ದಾರೆ.
“ಸುಪ್ರೀಂ ಕೋರ್ಟ್ನಿಂದ ನಾವು ಮಣಿಪುರ ಆಡಳಿತ ನಡೆಸಲು ಪ್ರಸ್ತಾಪಿಸುವುದಿಲ್ಲ. ನಾವು ಪ್ರತಿ ವಾರ ಪ್ರಕರಣ ಆಲಿಸುವುದಿಲ್ಲ, ಪ್ರತಿ ನಾಲ್ಕು ವಾರಗಳಿಗೊಮ್ಮೆ ನಾವು ಪ್ರಕರಣದ ವಿಚಾರಣೆ ನಡೆಸುತ್ತೇವೆ. ಮಣಿಪುರದ ಹೈಕೋರ್ಟ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ನಮಗನ್ನಿಸುವುದಿಲ್ಲ” ಎಂದು ಅವರು ನುಡಿದರು.
ರಾಜ್ಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಕಾರಣಗಳನ್ನು ವಿವರಿಸಲು ವಕೀಲರಿಗೆ ಹೈಕೋರ್ಟ್ ಹಾಜರಾಗಲು ಅವಕಾಶ ನೀಡುತ್ತಿಲ್ಲ ಎಂಬ ಸಲ್ಲಿಕೆಗಳಿಗೆ ಪ್ರತಿಕ್ರಿಯೆಯಾಗಿ ಪೀಠ ಈ ಅವಲೋಕನ ಮಾಡಿದೆ. ತಮಗೆ ಎರಡು ಸಂದರ್ಭದಲ್ಲಿ ಹಾಜರಾಗಲು ಅವಕಾಶ ನೀಡಲಿಲ್ಲ ಎಂದು ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ತಿಳಿಸಿದರೆ ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷರು “ಎಲ್ಲಾ ಸಮುದಾಯಗಳ ವಕೀಲರು ಪ್ರಕರಣಗಳಲ್ಲಿ ಹಾಜರಾಗುತ್ತಿದ್ದಾರೆ” ಎಂದು ತಿಳಿಸಿದರು. ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ವೇಳೆ ಈ ವಿಚಾರಗಳನ್ನು ತಿಳಿಸಲಾಯಿತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.