ರಾಯಚೂರು: ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸ್ಕಿ ಪೊಲೀಸ್ ಠಾಣೆ ಪಿಎಸ್ಐ ಮಣಿಕಂಠ ಅವರನ್ನು ಅಮಾನತು ಮಾಡಿ ಬಳ್ಳಾರಿ ವಲಯದ ಐಜಿ ಲೋಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಅಕ್ರಮ ಮರಳು ಸಾಗಾಟ ಆರೋಪದ ಮೇಲೆ ಟ್ರ್ಯಾಕ್ಟರ್ ಚಾಲಕ ನಿರುಪಾದಿ ಎನ್ನುವರಿಗೆ ಮನಬಂದಂತೆ ಬಾಸುಂಡೆ ಬರುವಂತೆ ಥಳಿಸಿದ್ದರು. ಈ ಬಗ್ಗೆ ನಿರುಪಾದಿ ಪತ್ನಿ ಲಕ್ಷ್ಮೀ ನೀಡಿದ್ದ ದೂರಿನ ಅನ್ವಯ ಮಣಿಕಂಠ ವಿರುದ್ಧ ಮಸ್ಕಿ ಠಾಣೆಯಲ್ಲೇ ಎಫ್ ಐಆರ್ ದಾಖಲಾಗಿತ್ತು. ಅಲ್ಲದೇ ವಾಲ್ಮೀಕಿ ಸಂಘ, ಮಣಿಕಂಠ ಅವರನ್ನು ಅಮಾನತು ಮಾಡುವಂತೆ ಠಾಣೆ ಮುಂದೆ ಪ್ರತಿಭಟನೆ ಮಾಡಿತ್ತು. ಇದೀಗ ಈ ಪ್ರಕರಣದಲ್ಲಿ ಪಿಎಸ್ಐ ಮಣಿಕಂಠ ಅವರನ್ನು ಅಮಾನತು ಮಾಡಲಾಗಿದೆ.
ಸೆಪ್ಟೆಂಬರ್ 20 ರಂದು ಮಸ್ಕಿ ಪಟ್ಟಣದಲ್ಲಿ ನಿರುಪಾದಿ ಎಂಬುವರು ಟ್ರ್ಯಾಕ್ಟರ್ ನಲ್ಲಿ ಮರಳು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಪಿಎಸ್ ಐ ಮಣಿಕಂಠ ಟ್ರ್ಯಾಕ್ಟರ್ ತಡೆದು ಮರಳು ತೆಗೆದುಕೊಂಡು ಹೋಗಲು 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ಅಲ್ಲದೇ ತನ್ನ ಜೀಪ್ ನಲ್ಲಿದ್ದ ಪೈಪ್ ತೆಗೆದುಕೊಂಡು ನಿರುಪಾದಿ ಅವರಿಗೆ ಮನಬಂದಂತೆ ಥಳಿಸಿದ್ದರು. ಹಾಗೇ ಪಿಎಸ್ ಐ ಮಣಿಕಂಠ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿತ್ತು. ಹೀಗಾಗಿ ಹಲ್ಲೆ, ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ವಾಲ್ಮೀಕಿ ನಾಯಕ ಮಾಹಾಸಭಾ ತಾಲೂಕು ಘಟಕವು ಪಿಎಸ್ ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಲಿಂಗಸೂರು ಡಿವೈಎ ಸ್ಪಿ ಮಂಜುನಾಥ ಹಾಗೂ ಸಿಪಿಐ ಬಾಲಚಂದ್ರ ಲಕ್ಕಂ ಅವರಿಗೆ ಮನವಿ ಸಲ್ಲಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.