ಚಾಮರಾಜನಗರ: ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದರು.
ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು.
ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೈ ಮಾದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ರಾಷ್ಟ್ರಪತಿ ಭವನ ಇನ್ನು ಮುಂದೆ ತಪೋಭವನ
ಮಲೈ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಾದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು. ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದರು.
ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿಗಳು ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಪಟ್ಟದ ಗುರುಸ್ವಾಮಿಗಳು, ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಅಧ್ಯಕ್ಷತೆಯನ್ನು ಹನೂರು ಶಾಸಕ ಎಂ.ಆರ್.ಮಂಜುನಾಥ್ ವಹಿಸಿದ್ದರು. ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಜಿಲ್ಲೆಯ ಶಾಸಕರು ಮತ್ತು ನಾಯಕರು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.