ಮೈಸೂರು: ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ CWRC ಆದೇಶ ಹೊರಡಿಸಿರುವ ಹಿನ್ನೆಲೆ ಮೈಸೂರಿನಲ್ಲಿ ಕಾವೇರಿಗಾಗಿ ಹೋರಾಟ ಮುಂದುರೆದಿದೆ ಕರ್ನಾಟಕ ಪ್ರಜಾಪಾರ್ಟಿ ವತಿಯಿಂದ ವಿನೂತನ ಪ್ರತಿಭಟನೆ ನಡೆಯುತ್ತಿದೆ.
ಕರ್ನಾಟಕ ಪ್ರಜಾಪಾರ್ಟಿ ಪಕ್ಷದ ರಾಜ್ಯಾಧ್ಯಕ್ಷ ವಕೀಲ ಶಿವಣ್ಣ ರವರ ನೇತೃತ್ವದಲ್ಲಿ ಅಂಚೆ ಚಳುವಳಿ ನಡೆದಿದ್ದು, ಕಾರ್ಯಕರ್ತರೆಲ್ಲ ಸೇರಿಕೊಂಡು ದೆಹಲಿಯ ಪ್ರಧಾನಿಗಳ ಕಚೇರಿಗೆ ಅಂಚೆ ಪೋಸ್ಟ್ ಮಾಡಿದ್ದಾರೆ.
ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು. ಕಾವೇರಿ ವಿಚಾರದಲ್ಲಿ ಪ್ರಧಾನಿಗಳು ಮಧ್ಯ ಪ್ರವೇಶ ಮಾಡಬೇಕು. ಈ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ರಾಜ್ಯದಿಂದ ಮತ್ತೆ ನೀರು ಹರಿಸಿದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರ ಹಾಗೂ ಪ್ರಾಧಿಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಪ್ರಾಧಿಕಾರದ ಆದೇಶ ಪಾಲನೆ ಮಾಡಬಾರದು. ಎಲ್ಲೋ ಎಸಿ ರೂಮಿನಲ್ಲಿ ಕುಳಿತು ಆದೇಶ ಮಾಡುವುದಲ್ಲ. ವಾಸ್ತವ ಸ್ಥಿತಿ ಅರಿತು ಆದೇಶ ಮಾಡಬೇಕು. ಈ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು. ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಸಂಸದರು ಒತ್ತಾಯ ಹೇರಬೇಕು. ಕಾವೇರಿ ವಿಚಾರದಲ್ಲಿ ಶ್ವಾಶತ ಪರಿಹಾರ ಸಿಗಬೇಕು. ೨೯ರ ಕರ್ನಾಟಕ ಬಂದ್ ಗೆ ನಮ್ಮ ಸಂಪೂರ್ಣ ಸಹಕಾರವಿದೆ.
ಮೈಸೂರಿನಲ್ಲೂ ಕರ್ನಾಟಕ ಬಂದ್ ಯಶಸ್ವಿ ಆಗಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನದ ಬಣದ ಜಗದೀಶ್ ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.