ಮನೆ ಅಪರಾಧ ಕಟ್ಟಡದ ಬಾಡಿಗೆ  ಕೇಳಿದ್ದಕ್ಕೆ ಇಬ್ಬರು ಮಹಿಳೆಯರ ಮೇಲೆ ಹಲ್ಲೆ: ದೂರು ದಾಖಲು

ಕಟ್ಟಡದ ಬಾಡಿಗೆ  ಕೇಳಿದ್ದಕ್ಕೆ ಇಬ್ಬರು ಮಹಿಳೆಯರ ಮೇಲೆ ಹಲ್ಲೆ: ದೂರು ದಾಖಲು

0

ತುಮಕೂರು: ಕಟ್ಟಡದ ಬಾಡಿಗೆ ಕೇಳಿದ್ದಕ್ಕೆ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ಪಟ್ಟಣದಲ್ಲಿ ನಡೆದಿದೆ.

Join Our Whatsapp Group

ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಲಿಂಗರಾಜು ಎನ್ನುವಾತ ಕಳೆದ ಎರಡೂವರೆ ವರ್ಷಗಳಿಂದ ಕಟ್ಟಡದ ಬಾಡಿಗೆ ಕೊಡದೆ ಸತಾಯಿಸುತ್ತಿದ್ದ. ನಿನ್ನೆ ಬಾಡಿಗೆ ಕೇಳಲು ಹೋಗಿದ್ದ ಕಟ್ಟಡದ ಮಾಲೀಕರಾದ ಶಾಹಿನ್ ತಾಜ್ ಮತ್ತು ಗುಜರ್ ಬಾನು ಮೇಲೆ ಹಲ್ಲೆ ಮಾಡಿದ್ದಾರೆ.

ಬಾಡಿಗೆ ಕೊಡುವುದಿಲ್ಲ ಎಂದು ಅವಾಜ್ ಹಾಕಿ ಹಲ್ಲೆ ಮಾಡಿದ್ದು, ಇದೀಗ ಗಲಾಟೆ ದೃಶ್ಯ ಮೊಬೈಲ್​ ನಲ್ಲಿ ಸೆರೆಯಾಗಿದೆ. ಹಲ್ಲೆ ಸಂಬಂಧ ಮಹಿಳೆಯರು ತಿಪಟೂರು ಠಾಣೆಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ಲಿಂಗರಾಜ್ ವಿರುದ್ಧ ಎಫ್ ​ಐಆರ್ ದಾಖಲಾಗಿದೆ.