ಬಳ್ಳಾರಿ ಜಿಲ್ಲೆಯ ಹಡಗಲಿಯ ನೈಋತ್ಯಕ್ಕೆ 16 ಕಿಮೀ ದೂರದಲ್ಲಿರುವ ಊರೇ ಹಿರೇಹಡಗಲಿ. ಈ ಊರಿನಲ್ಲಿ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಅಂದರೆ 9-10ನೇ ಶತಮಾನದಲ್ಲಿ ನಿರ್ಮಿಸಲಾದ ಸುಂದರ ಕಲ್ಲೇಶ್ವರ ದೇವಾಲಯವಿದೆ.
ಕೆರೆಯ ಪಕ್ಕದಲ್ಲಿ ನಿರ್ಮಿಸಲಾಗಿರುವ ಈ ದೇವಾಲಯ ಕಟ್ಟೆ ಬಸವೇಶ್ವರ ದೇವಸ್ಥಾನ ಎಂದೇ ಖ್ಯಾತವಾಗಿದೆ. ಚಾಳುಕ್ಯ ವಾಸ್ತು ಶೈಲಿಯಲ್ಲಿರುವ ದೇವಾಲಯದ ಬಾಗಿಲುಗಳು ಮತ್ತು ಹೊರಗೋಡೆಗಳು ಸುಂದರ ಕೆತ್ತನೆಗಳಿಂದ ಕೂಡಿವೆ.
ನಕ್ಷತ್ರಾಕಾರದ ಜಗಲಿಯ ಮೇಲೆ, ಸುಂದರ ಕೆತ್ತನೆಯಿಂದ ಕೂಡಿದ ಕಂಬಗಳ ಮುಖಮಂಟಪ, ಸುಖನಾಸಿ, ಭುವನೇಶ್ವರಿ, ಅಂತರಾಳ ಹಾಗೂ ಗರ್ಭಗೃಹವನ್ನೊಳಗೊಂಡ ಈ ದೇವಾಲಯದ ಹೊರಭಿತ್ತಿಗಳಲ್ಲಿ ಹಾಗೂ ಕಂಬಗಳಲ್ಲಿ ಸುಂದರವಾದ ಕಲಾತ್ಮಕ ಕೆತ್ತನೆ ಇದೆ. ಅರೆ ಗೋಪುರಗಳು, ಅರೆಕಂಬಗಳು ಹಾಗೂ ಲತಾಸುರಳಿಗಳ ಪಟ್ಟಿಕೆಗಳ ಶಿಲಾಲಂಕಾರಗಳು, ಸಿಂಹಲಾಂಛನ ಮನಸೆಳೆಯುತ್ತವೆ.
ಇಂದಿಗೂ ಕಲ್ಯಾಣ ಚಾಲುಕ್ಯರ ಶಿಲ್ಪ ಕಲಾವೈಭವಕ್ಕೆ ಸಾಕ್ಷಿಯಾಗಿರುವ ಈ ದೇವಾಲಯವನ್ನು ಪ್ರಾಚ್ಯವಸ್ತು ಇಲಾಖೆ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ, ಪೋಷಿಸಿದೆ. ದೇವಾಲಯದ ಸುತ್ತ ಸುಂದರ ಉದ್ಯಾನ ನಿರ್ಮಿಸಲಾಗಿದ್ದು, ಹಚ್ಚಹಸುರಿನ ಹುಲ್ಲಹಾಸು ದೇವಾಲಯದ ಸೌಂದರ್ಯವನ್ನು ಇಮ್ಮಡಿಗೊಳಿಸಿದೆ.
ಏಕಕೂಟವಾದ ಈ ದೇವಾಲಯದ ಮೇಲ್ಗೋಪುರದ ಒಂದು ಭಾಗಕ್ಕೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ದುರಸ್ತಿ ಮಾಡಲಾಗಿದೆ.
ಪ್ರತಿವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ಇಲ್ಲಿ ರಥೋತ್ಸವ ನಡೆಯುತ್ತದೆ. ಇದು ಕಟ್ಟೆ ಬಸವೇಶ್ವರ ರಥೋತ್ಸವ ಎಂದೇ ಖ್ಯಾತಿ ಪಡೆದಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.