ಮನೆ ರಾಜಕೀಯ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ: ಸಿದ್ದರಾಮಯ್ಯ

ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ: ಸಿದ್ದರಾಮಯ್ಯ

0

ಹರಿಹರ (Harihara)- 2023ರ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿಯನ್ನು ಕಾಂಗ್ರೆಸ್‌ ಹೊಂದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಮಾಡಿದಂತೆಯೇ ನಮ್ಮ ಹೈಕಮಾಂಡ್ ಕೂಡ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವಂತೆ ಸೂಚನೆ ನೀಡಿದೆ. ಈ ಗುರಿ ಸಾಧಿಸಲು ಪಕ್ಷವು ಸೂಕ್ತ ಹಾದಿಯಲ್ಲಿ ಸಾಗುತ್ತಿದೆ ಎಂದರು.

ಈಗಾಗಲೇ ನಾವು ಸಿದ್ಧತೆ ಆರಂಭಿಸಿದ್ದು, ಚುನಾವಣೆಗೆ ಆರು ತಿಂಗಳ ಮುಂಚೆಯೇ ಅಭ್ಯರ್ಥಿಗಳನ್ನು ಘೋಷಿಸುವಂತೆ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು. ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆಗಿಳಿಯುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಚುನಾವಣೆ ಹತ್ತಿರಬಂದಾಗ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ಇದೇ ವೇಳೆ ಹುಬ್ಬಳ್ಳಿ ಹಿಂಸಾಚಾರದ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿರುವ ಸಿದ್ದರಾಮಯ್ಯ ಅವರು, ಹಿಂಸಾಚಾರಕ್ಕೆ ಅಭಿಷೇಕ್ ಹಿರೇಮಠ್ ಪ್ರಚೋದನೆ ನೀಡಿದ್ದಾರೆಂದು ತಿಳಿಸಿದರು.

ಬಳಿಕ ಶ್ರೀರಾಮ ಸೇನೆ ವಿರುದ್ಧ ವಾಗ್ದಾಳಿ ನಡೆಸಿ, ಕರ್ನಾಟಕದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುತ್ತಿರುವ ಶ್ರೀರಾಮ ಸೇನೆಯನ್ನು ಬುಲ್ಡೋಜರ್ ಬಳಸಿ ಸರ್ಕಾರ ಕೆಡವಬೇಕೆಂದು ಹೇಳಿದರು. ಇದೇ ವೇಳೆ ಜೆಡಿಎಸ್ ಅನ್ನು ಬಿಜೆಪಿಯ ‘ಬಿ’ ಟೀಮ್ ಎಂದು ಹೇಳಿದರು.