ಮನೆ ಅಪರಾಧ ಮುಡಾ ನಿವೇಶನ ಕೊಡಿಸುವುದಾಗಿ ವಂಚನೆ: ನಿವೃತ್ತ ಡಿವೈಎಸ್ ಪಿ ವಿಜಯಕುಮಾರ್ ಬಂಧನ

ಮುಡಾ ನಿವೇಶನ ಕೊಡಿಸುವುದಾಗಿ ವಂಚನೆ: ನಿವೃತ್ತ ಡಿವೈಎಸ್ ಪಿ ವಿಜಯಕುಮಾರ್ ಬಂಧನ

0

ಮೈಸೂರು : ಮುಡಾ ನಿವೇಶನ ಕೊಡಿಸುವುದಾಗಿ ಬೀದಿ ಬದಿ ವ್ಯಾಪಾರಿಗೆ ವಂಚಿಸಿದ ಪ್ರಕರಣದ ಎರಡನೇ ಆರೋಪಿಯಾಗಿರುವ ನಿವೃತ್ತ ಡಿವೈಎಸ್ ಪಿ ವಿಜಯಕುಮಾರ ಅವರನ್ನು ಲಕ್ಷ್ಮಿಪುರಂಠಾಣೆ ಪೋಲೀಸರು ಮಂಗಳವಾರ ಬಂಧಿಸಿದ್ದಾರೆ.

ಈ ಪ್ರಕರಣದ ಪ್ರಮುಖ ಆರೋಪಿ ಮಾಜಿ ಕಾರ್ಪೊರೇಟರ್ ಆರ್.ಸೋಮ ಸುಂದರ್ ಅವರನ್ನು ಸೆ. 28 ರಂದು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ವಂಚನೆಗೆ ಸಹಕರಿಸಿದ ಆರೋಪವಿರುವ ನಿವೃತ್ತ ಡಿವೈಎಸ್ ಪಿ ವಿಜಯಕುಮಾರ್ ತಲೆಮರೆಸಿಕೊಂಡಿದ್ದರು.

ಮುಡಾ ನಿವೇಶನ ಕೊಡಿಸುವುದಾಗಿ ಭರವಸೆ ನೀಡಿ, ನಕಲಿ ದಾಖಲೆ ಸೃಷ್ಟಿಸಿ, ನನ್ನಿಂದ 12 ಲಕ್ಷ ರೂ. ಹಣ ಪಡೆದು ವಂಚಿಸಿರುವುದಾಗಿ ಮೈಸೂರಿನ ಬೋಗಾದಿ ಬ್ಯಾಂಕ್ ಕಾಲೋನಿ ನಿವಾಸಿ ಪುಟ್ಟರಾಜೇಗೌಡರ ಮಗ ವೆಂಕಟರಾಜು ನೀಡಿದ ದೂರಿನ ಮೇರೆಗೆ ಆರ್.ಸೋಮಸುಂದರ್ ಮತ್ತು ವಿಜಯ್ ಕುಮಾರ್ ವಿರುದ್ಧ ಲಕ್ಷ್ಮಿಪುರಂ ಠಾಣೆಯಲ್ಲಿ ಸೆ. 25 ರಂದು ಎಫ್.ಐ.ಆರ್ ದಾಖಲಾಗಿತ್ತು.