ಮಂಡ್ಯ: ಕಾವೇರಿಗಾಗಿ ರೈತರು ನಿರಂತರವಾಗಿ ಹೋರಾಟ ಮಾಡ್ತಿದ್ದಾರೆ. ನಮ್ಮ ನೀರು ನಮ್ಮ ಹಕ್ಕು. ರಾಜಕೀಯಕ್ಕಾಗಿ ಬೇಳೆ ಬೇಯಿಸಿ ಕೊಳ್ತಿದ್ದಾರೆ. ನಮ್ಮನ್ನು ಮೂಲೆಗುಂಪು ಮಾಡಿದ್ದಾರೆ. ರೈತರಿಗೆ ಬೆಂಬಲ ನೀಡಿ ಅವರ ಪರ ನಿಲ್ತೇವೆ ಎಂದು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಹೇಳಿದರು.
ಮಂಡ್ಯದಲ್ಲಿ ರೈತ ಹಿತರಕ್ಷಣಾ ಸಮಿತಿ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಕೀಯದವರ ಬಗ್ಗೆ ಮಾತನಾಡಲ್ಲ, ರೈತರಿಗೆ ಅನ್ಯಾಯ ಆಗಬಾರದು. ಬೆಂಗಳೂರಿಗರು ಕುಡಿಯುವ ನೀರು ಇಲ್ಲ ಅವರ ಪರಿಸ್ಥಿತಿ ಬಗ್ಗೆ ಆಲೋಚನೆ ಮಾಡಬೇಕು. ಇನ್ನು 15 ದಿನ ಕಳೆದರೆ ನೀರಿಗೆ ಹಾಹಾಕಾರ ಉಂಟಾಗಲಿದೆ. ನಮ್ಮ ಪರಿಸ್ಥಿತಿಯನ್ನ ರಾಜ್ಯ ಸರ್ಕಾರ ನೋಡಬೇಕು ಎಂದರು.
ಕಾವೇರಿಗಾಗಿ ನಾವು ಹೋರಾಟಾ ಮಾಡ್ತೇವೆ. ಸಂಪೂರ್ಣ ಬೆಂಬಲವನ್ನು ಕೊಡ್ತೇವೆ. ತಕ್ಷಣವೇ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ನಿಲ್ಲಸಿ. ಪ್ರಧಾನ ಮಂತ್ರಿ ಮಧ್ಯೆ ಪ್ರವೇಶಿಸಿ ಎರಡೂ ರಾಜ್ಯದ ಸಿಎಂ ಕರೆದು ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಷ್ಟೆ ಬಿಟ್ಟು ನೀರು ಉಳಿಸಿಕೊಳ್ಳಿ. ಸಂಸದರು ಯಾರು ನೀರಿನ ಕಷ್ಟ ಅರ್ಥಮಾಡಿಕೊಂಡಿಲ್ಲ. ಧ್ವನಿ ಎತ್ತುವ ಕೆಲಸ ಮಾಡಿ, ರಾಜ್ಯದಲ್ಲಿ ಎಲ್ಲಾ ರಾಜ್ಯದ ಜನರು ಇದ್ದಾರೆ. ಅವರಿಗೂ ಕುಡಿಯುವ ನೀರು ಬೇಕು. ತಕ್ಷಣವೇ ನೀರಿನ ಸಮಸ್ಯೆಗಳನ್ನು ಬಗೆಹರಿಸಿ ಎಂದು ಆಗ್ರಹಿಸಿದರು.
ಇದಕ್ಕು ಮುನ್ನ ಸಂಜಯ್ ವೃತ್ತದಲ್ಲಿ ಬೆಂ-ಮೈ ಹೆದ್ದಾರಿ ತಡೆದು, ಮಾನವಸರಪಳಿ ನಿರ್ಮಿಸಿ ಗುತ್ತಿಗೆದಾರರು ಪ್ರತಿಭಟನೆ ನಡೆಸಿದರು.
ಹೆದ್ದಾರಿ ತಡೆಯಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.