ನವದೆಹಲಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ300 ಕೋಟಿ ರೂ. ಮೌಲ್ಯದ ಅಕ್ರಮ ಆರೋಪ ಸಂಬಂಧ ಅಪರಿಚಿತ ಅಧಿಕಾರಿಗಳ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದೆ.
ದೇಶಾದ್ಯಂತ ಹಾಗೂ ವಿದೇಶದಲ್ಲೂ ಮೈಸೂರು ಮೂಲದ ಕೆ.ಎಸ್.ಓ.ಯು ನಿಯಮ ಉಲ್ಲಂಘಿಸಿ ಸಹಯೋಗ ಸಂಸ್ಥೆಗಳನ್ನು ತೆರೆದಿತ್ತು ಎಂದು ಉಲ್ಲೇಖಿಸಲಾಗಿದೆ.
ಈ ಸಹಯೋಗ ಸಂಸ್ಥೆಗಳು ಪ್ರವೇಶ ಶುಲ್ಕ, ಪರೀಕ್ಷಾ ಶುಲ್ಕ, ಸೇರಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಕೆ.ಎಸ್.ಓ.ಯು ಗೆ ಭರಿಸುತ್ತಿದ್ದವು. ಆದರೆ ಆಡಿಟ್ ನಲ್ಲಿ, 2013-14 ಮತ್ತು 2014-15 ಹಣಕಾಸು ವರ್ಷದಲ್ಲಿ ಈ ಸಹಯೋಗ ಸಂಸ್ಥೆಗಳು ಭರಿಸಿರುವ 50 ಕೋಟಿ ರೂ. ನಾಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅದೇ ರೀತಿ ಅಡಿಟ್ ನಲ್ಲಿ, 2009-10 ರಿಂದ 2012-13 ಹಣಕಾಸು ವರ್ಷಗಳಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ ಶುಲ್ಕದಲ್ಲಿ 250 ಕೋಟಿ ರೂ. ಕಾಣೆಯಾಗಿದೆ ಇದಕ್ಕೆ ಸೂಕ್ತ ದಾಖಲೆಗಳಿಲ್ಲ.
ಒಟ್ಟು 300 ಕೋಟಿ ರೂ.ಗಳ ಅಕ್ರಮ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇತ್ತೀಚಿಗೆ ಕೆ ಎಸ್ ಓ ಯು ನಿರ್ದೇಶಕರ ಮಂಡಳಿಯು ಸಿಬಿಐ ತನಿಖೆಗೆ ಒತ್ತಾಯಿಸಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.