ಮನೆ ಅಪರಾಧ ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

0

ಹನೂರು : ಗಾಂಜಾ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದ ಬಸವರಾಜು (52) ಬಂಧಿತ ಆರೋಪಿ.

ಮಲೆ ಮಾದೇಶ್ವರ ಬೆಟ್ಟದ ಮುಖ್ಯರಸ್ತೆಯ ಯಶಸ್ವಿನಿ ಲೇಔಟ್ ಸಮೀಪದ ಪ್ರಕೃತಿ ಕೆಫೆ ಬಳಿ ಅಕ್ರಮವಾಗಿ ಒಣ ಗಾಂಜಾ ಮಾರಾಟ ಮಾಡಲು ಗಾಂಜಾ ಸಂರಕ್ಷಣೆ ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅಬಕಾರಿ ಆಯುಕ್ತ ನಾಗಶಯನ, ಅಬಕಾರಿ ಉಪ ಅಧೀಕ್ಷಕರಾದ ಎಂಡಿ ಮೋಹನ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕರಾದ ಮಹದೇವ್ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ಸಂಗ್ರಹಣೆ ಮಾಡಿದ್ದ 500 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಅಬಕಾರಿ ಉಪನೀರೀಕ್ಷಕ ಮಹೇಶ್, ಪೇದೆ ಬಿ. ಸಿದ್ದರಾಜು ವಾಹನ ಚಾಲಕ ಸಂತೋಷ್ ಕುಮಾರ್ ದಾಳಿಯಲ್ಲಿ ಭಾಗವಹಿಸಿದ್ದಾರೆ.