ಸಂವಿಧಾನದ 105(2) ಮತ್ತು 194(2) ನೇ ವಿಧಿಯಡಿ ಚುನಾಯಿತ ಜನಪ್ರತಿನಿಧಿಗಳಿಗೆ ಇರುವ ಕಾನೂನಾತ್ಮಕ ರಕ್ಷಣೆಯು ಲಂಚದ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುವುದರಿಂದ ಅವರಿಗೆ ರಕ್ಷಣೆ ಒದಗಿಸುತ್ತದೆಯೇ ಎಂಬುದಕ್ಕೆ ಸಂಬಂಧಿಸಿದ ಪ್ರಕರಣದ ತೀರ್ಪನ್ನು ಗುರುವಾರ ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠವು ಕಾಯ್ದಿರಿಸಿದೆ.
ಕೇಂದ್ರ ಸರ್ಕಾರದ ವಾದವನ್ನು ಮತ್ತು ಅರ್ಜಿದಾರರ ಪ್ರತ್ಯುತ್ತರ ವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ, ಎಂ ಎಂ ಸುಂದರೇಶ್, ಪಿ ಎಸ್ ನರಸಿಂಹ, ಜೆ ಬಿ ಪರ್ದಿವಾಲಾ, ಪಿ ವಿ ಸಂಜಯ್ ಕುಮಾರ್ ಮತ್ತು ಮನೋಜ್ ಮಿಶ್ರಾ ಅವರ ನೇತೃತ್ವದ ಪೀಠವು ಪ್ರಕರಣದ ತೀರ್ಪು ಕಾಯ್ದಿರಿಸಿದೆ.
ರಕ್ಷಣೆ ನಿರ್ಧರಿಸಲು ಕಾರ್ಯಕಾರಿ ಪರೀಕ್ಷೆ ಅಗತ್ಯವಿದೆ. ಇದು ಪರಿಣಾಮಗಳ ಭಯವಿಲ್ಲದೆ ಶಾಸಕನ ಕರ್ತವ್ಯವನ್ನು ನಿರ್ವಹಿಸಲು ಅಗತ್ಯವಿರುವ ಭಾಷಣ ಅಥವಾ ಮತದಾನದ ಕಾರ್ಯಗಳಿಗೆ ವಿಸ್ತರಿಸಬಹುದು ಎಂದು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಸಲಹೆ ನೀಡಿದರು.
ಸಂಸತ್ತಿನಲ್ಲಿ ಅಥವಾ ಸಂಸದೀಯ ಸಮಿತಿಯ ಮುಂದೆ ನೀಡುವ ಹೇಳಿಕೆಗಳು, ಹಾಕುವ ಮತಗಳಿಗೆ ಸಂಬಂಧಿಸಿದಂತೆ ಸಂಸದರಿಗೆ ಸಂವಿಧಾನದ 105(2) ನೇ ವಿಧಿಯಡಿ ಯಾವುದೇ ವಿಚಾರಣೆಯಿಂದ ರಕ್ಷಣೆ ಇದೆ. ಸಂವಿಧಾನದ 194(2) ನೇ ವಿಧಿಯು ರಾಜ್ಯಗಳಲ್ಲಿ ಶಾಸಕರಿಗೆ ಅದೇ ರೀತಿಯ ವಿನಾಯಿತಿ ಕಲ್ಪಿಸುತ್ತದೆ. ಈ ವಿನಾಯಿತಿಯು ಲಂಚದ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುವುದರಿಂದಲೂ ರಕ್ಷಣೆ ನೀಡುತ್ತದೆಯೇ ಎನ್ನುವ ವಿಚಾರ ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠದ ಮುಂದಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.