ಬೆಂಗಳೂರು: ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗುವ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಭವಿಷ್ಯ ನುಡಿದಿದ್ದಾರೆ.
ರಾಮನಗರ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿಯಲ್ಲಿ ಪಕ್ಷದ ಮುಖಂಡರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜೊತೆಗಿನ ಮೈತ್ರಿ ಸರ್ಕಾರದ ಪತನಕ್ಕೆ ಡಿಕೆ ಶಿವಕುಮಾರ್ ಕಾರಣ ಎಂದು ಆರೋಪಿಸಿದರು. ಜೋಡೆತ್ತು ಎಂದು ಬಲವಂತವಾಗಿ ನನ್ನ ಕೈ ಮೇಲೆತ್ತಿ ಒಳಗೊಳಗೆ ರಾಜಕೀಯ ಮಾಡಿ ಸರ್ಕಾರವನ್ನು ಬೀಳಿಸಿದರು. ನಂತರ ಸರ್ಕಾರ ಉಳಿಸಲು ಪ್ರಯತ್ನ ಮಾಡಿದ್ದೇವೆ ಎಂದು ಮೊಸಳೆ ಕಣ್ಣೀರು ಹಾಕಿದರು. ಅವರನ್ನು ನಂಬಿ ಕುತ್ತಿಗೆ ಕೊಯ್ದುಕೊಂಡಿದ್ದೇನೆ. ನಿಮ್ಮ ಕುತ್ತಿಗೆಯನ್ನು ಕೊಯ್ದಿದ್ದೇನೆ ಎಂದರು.
ಸರ್ಕಾರದ ಪಾಪದ ಮಡಕೆ ತುಂಬಿ ತುಳುಕುತ್ತಿದೆ, ಇಂತಹ ಕೆಟ್ಟ ಸರ್ಕಾರವನ್ನು ನಾನು ಎಂದೂ ನೋಡಿಲ್ಲ, ಈ ಸರ್ಕಾರ ಆಂತರಿಕ ಕಲಹದಿಂದ ಕುಸಿದು ಬೀಳಲಿದೆ. 2024 ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ, ಮುಂದೇನಾಗುತ್ತದೆ ಎಂಬುದು ನನಗೆ ಗೊತ್ತಿದೆ, ಆ ಚುನಾವಣೆಯಲ್ಲಿ ಡಿಕೆಶಿ ಅಭ್ಯರ್ಥಿಯಾಗಿ ನಿಲ್ಲುವ ಸಾಧ್ಯತೆಗಳಿಲ್ಲ. ಈಗಾಗಲೇ ಒಮ್ಮೆ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ. ಇದೀಗ ಮತ್ತೆ ಶಾಶ್ವತವಾಗಿ ತಿಹಾರ್ ಜೈಲಿಗೆ ಹೋದರೂ ಆಶ್ಚರ್ಯವಿಲ್ಲ ಎಂದು ಹೇಳಿದರು.
ಮಾಜಿ ಸಚಿವ ರಮೇಶ್ ಜಾರಕಿಹೊಳಿಗೂ ನನಗೂ ಯಾವುದೇ ವೈಷಮ್ಯ ಇರಲಿಲ್ಲ. ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ರಾಜಕೀಯಕ್ಕೆ ಡಿಕೆಶಿ ಹಾಕಿದರು. ಇದರ ಪರಿಣಾಮ ಈ ಬ್ಯಾಂಕ್ ರಾಜಕೀಯಕ್ಕೆ ನಾನು ಬಲಿಪಶುವಾದೆ ಎಂದು ತಿಳಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.