ಮನೆ ರಾಜ್ಯ ಡಿಕೆಶಿ ಟಾರ್ಗೆಟ್ ಪಾಲಿಟಿಕ್ಸ್: ಆರ್ ಆರ್ ನಗರದ ಶಾಸಕ ಮುನಿರತ್ನ ಧರಣಿ

ಡಿಕೆಶಿ ಟಾರ್ಗೆಟ್ ಪಾಲಿಟಿಕ್ಸ್: ಆರ್ ಆರ್ ನಗರದ ಶಾಸಕ ಮುನಿರತ್ನ ಧರಣಿ

0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಟಾರ್ಗೆಟ್ ಪಾಲಿಟಿಕ್ಸ್ ವಿರುದ್ಧ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಇಂದು (ಬುಧವಾರ) ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಸಮೀಪ ಧರಣಿ ನಡೆಸಿದ್ದಾರೆ.

ಮುನಿರತ್ನ ಅವರನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಿಂದ ಮುನಿರತ್ನ ಅವರು ಏಕಾಂಗಿಯಾಗಿ ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದಾರೆ.

ಬಸವರಾಜ್ ಬೊಮ್ಮಾಯಿ ಸರ್ಕಾರದಲ್ಲಿ ಆರ್​​ ಆರ್​ ನಗರಕ್ಕೆ ನೀಡಿದ್ದ ಒಟ್ಟು 126 ಕೋಟಿ ರೂ. ಅನುದಾನವನ್ನು ಇದೀಗ ಕಾಂಗ್ರೆಸ್ ಸರ್ಕಾರ ಬೇರೆ ಕ್ಷೇತ್ರಗಳಿಗೆ ನೀಡಿದೆ. ಸ್ವತಃ ಡಿಕೆ ಶಿವಕುಮಾರ್ ಅವರೇ ಆರ್ ​ಆರ್​​ ನಗರ ಕ್ಷೇತ್ರದ ಅನುದಾನ ಯಶವಂತಪುರ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ನೀಡಿದ್ದಾರೆ ಎಂದು ಮುನಿರತ್ನ ಅವರ ಆರೋಪವಾಗಿದೆ. ಈ ಹಿನ್ನೆಲೆಯಲ್ಲಿ ಆ ಅನುದಾನವನ್ನು ಆರ್​ಆರ್​ ಕ್ಷೇತ್ರಕ್ಕೆ ವಾಪಸ್‍ ನೀಡುವಂತೆ ಆಗ್ರಹಿಸಿ ಇಂದು ಒಂದು ದಿನ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.