ಮನೆ ರಾಜ್ಯ ವಿರೋಧ ಪಕ್ಷದ ನಾಯಕನಿಲ್ಲ ಎಂಬುದನ್ನು ಜನತೆ, ಬಿಜೆಪಿ ಪಕ್ಷ ಮರೆತೇ ಹೋಗಿದೆ: ಕಾಂಗ್ರೆಸ್‌

ವಿರೋಧ ಪಕ್ಷದ ನಾಯಕನಿಲ್ಲ ಎಂಬುದನ್ನು ಜನತೆ, ಬಿಜೆಪಿ ಪಕ್ಷ ಮರೆತೇ ಹೋಗಿದೆ: ಕಾಂಗ್ರೆಸ್‌

0

ಬೆಂಗಳೂರು: ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕನಿಲ್ಲ ಎಂಬ ಸಂಗತಿಯನ್ನು ಜನತೆ ಹಾಗೂ ಬಿಜೆಪಿ ಪಕ್ಷ ಬಹುತೇಕ ಮರೆತೇ ಹೋಗಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ.

ಈ ಸಂಬಂಧ ಎಕ್ಸ್‌ ನಲ್ಲಿ ಪೋಸ್ಟರ್‌ ಒಂದನ್ನು ಹಂಚಿಕೊಂಡಿರುವ ಕಾಂಗ್ರೆಸ್, ಕರ್ನಾಟಕದ ಜನತೆ ಮರೆತಿರುವ ಸಂಗತಿಯನ್ನು ಮತ್ತೆ ನೆನಪಿಸುತ್ತಿದ್ದೇವೆ, ಪ್ರಮುಖ ಸಾಮವಿಧಾನಿಕ ಹುದ್ದೆಯಾದ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿ ಇದೆʼʼ ಎಂದು ಉಲ್ಲೇಖಿಸಿದೆ.

ಪ್ರಮುಖ ಸಾಮವಿಧಾನಿಕ ಹುದ್ದೆಯೊಂದನ್ನು ಖಾಲಿ ಬಿಟ್ಟಿರುವ ಬಿಜೆಪಿ ಪ್ರಜಾತಂತ್ರ ವ್ಯವಸ್ಥೆಗೆ ಹಾಗೂ ಸಂವಿಧಾನಕ್ಕೆ ಅಪಚಾರ ಮಾಡುತ್ತಿದೆ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಬಿಜೆಪಿಗೆ ಆಡಳಿತದಲ್ಲಿ ಮಾತ್ರ ಅಸಾಮರ್ಥ್ಯವಿರುವುದಲ್ಲ, ಆಂತರಿಕ ಕಲಹ ನಿಭಾಯಿಸುವುದರಲ್ಲಿ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವುದರಲ್ಲೂ ಅಸಮರ್ಥವಾಗಿದೆ. ಬಿಜೆಪಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ನಿಮ್ಮ ವರಿಷ್ಠರಿಗೆ ಸೂಕ್ತ ಸಮಯ ಬರಲಿಲ್ಲವೇ? ಕುಮಾರಸ್ವಾಮಿಯವರನ್ನು ಭೇಟಿ ಮಾಡಲು ಸಮಯವಿರುವ ಹೈಕಮಂಡಿಗೆ ಸ್ವಂತ ಪಕ್ಷದ ಸಮಸ್ಯೆ ಬಗೆಹರಿಸಲು ಸಮಯವಿಲ್ಲವೇ? ಅಥವಾ ನಿಮ್ಮಲ್ಲಿ ಆ ಹುದ್ದೆಗೆ ಯೋಗ್ಯತೆ, ಅರ್ಹತೆ ಇರುವ ವ್ಯಕ್ತಿ ಯಾರೂ ಇಲ್ಲವೇ? ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.