ಲಖನೌ (ಉತ್ತರ ಪ್ರದೇಶ): ಐಸಿಸಿ ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸತತ ಎರಡನೇ ಸೋಲು ಕಂಡಿದೆ.
ಲಖನೌದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 134 ರನ್ ಗಳ ಸೋಲು ಕಂಡಿದೆ. ಪಂದ್ಯದ ಬಳಿಕ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಮಾತನಾಡಿದ್ದು, ತಂಡ ಎಲ್ಲ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ. ಪಂದ್ಯ ಸವಾಲಿನಿಂದ ಕೂಡಿದ್ದು, ಸೋಲು ಎಲ್ಲರಿಗೂ ನೋವು ತಂದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 311 ರನ್ ಕಲೆಹಾಕಿತು. 312 ರನ್ ಗಳ ಕಠಿಣ ಗುರಿ ಪಡೆದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಸೌತ್ ಆಫ್ರಿಕಾ ಬೌಲರ್ ಗಳು ಯಶಸ್ವಿಯಾದರು. ಕರಾರುವಾಕ್ ದಾಳಿ ಸಂಘಟಿಸಿದ ಸೌತ್ ಆಫ್ರಿಕಾ ಬೌಲರ್ ಆಸೀಸ್ ಪಡೆಗೆ ಶಾಕ್ ಮೇಲೆ ಶಾಕ್ ನೀಡಿದರು. ಪರಿಣಾಮ 65 ರನ್ ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಐವರು ಬ್ಯಾಟರ್ ಗಳು ಪೆವಿಲಿಯನ್ ಸೇರಿದ್ದರು.
ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೇನ್ 46 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 140 ರ ಗಡಿದಾಟಿಸಿದರು. ಈ ಹಂತದಲ್ಲಿ ದಾಳಿಗಿಳಿದ ಸ್ಪಿನ್ನರ್ ಕೇಶವ್ ಮಹಾರಾಜ್ ಎರಡು ವಿಕೆಟ್ ಪಡೆಯುವ ಮೂಲಕ ಮಿಂಚಿದರು. ಇನ್ನು ಅಂತಿಮ ಎರಡು ವಿಕೆಟ್ ಗಳನ್ನು ತಬ್ರೇಝ್ ಶಂಸಿ ಉರುಳಿಸಿದರು. ಇದರೊಂದಿಗೆ ಆಸ್ಟ್ರೇಲಿಯಾ ತಂಡವು 40.5 ಓವರ್ ಗಳಿಗೆ 177 ರನ್ ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಸೌತ್ ಆಫ್ರಿಕಾ ತಂಡವು 134 ರನ್ ಗಳ ಭರ್ಜರಿ ಜಯ ಸಾಧಿಸಿತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.