ನವದೆಹಲಿ: ಇಸ್ರೇಲ್-ಹಮಾಸ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ, ಇಸ್ರೇಲ್ ನಿಂದ 235 ಭಾರತೀಯ ಪ್ರಜೆಗಳನ್ನು ಕರೆತರುವ 2ನೇ ವಿಮಾನ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.
ನಿನ್ನೆ ಆಪರೇಷನ್ ಅಜಯ್ ಕಾರ್ಯಾಚರಣೆಯಡಿ 212 ಭಾರತೀಯ ಪ್ರಜೆಗಳನ್ನು ಸಂಘರ್ಷ ಪೀಡಿತ ದೇಶದಿಂದ ಸ್ವದೇಶಕ್ಕೆ ಮರಳಿ ಕರೆತರಲಾಯಿತು.
ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಭಾರತೀಯ ಪ್ರಜೆಗಳನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ರಾಜಕುಮಾರ್ ರಂಜನ್ ಸಿಂಗ್ ಬರಮಾಡಿಕೊಂಡರು.
ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ 235 ಭಾರತೀಯರನ್ನು ಹೊತ್ತ ವಿಮಾನ ಇಸ್ರೇಲ್ ನ ಟೆಲ್ ಅವೀವ್ ನಿಂದ ಟೇಕ್ ಆಫ್ ಆಗುತ್ತಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಾಹಿತಿ ಹಂಚಿಕೊಂಡಿದ್ದರು.
ಇಸ್ರೇಲ್ ನಿಂದ ಸಿಲುಕಿರುವ ನಾಗರಿಕರನ್ನು ಮರಳಿ ಕರೆತರಲು ಸರ್ಕಾರ ಅಕ್ಟೋಬರ್ 11 ರಂದು ‘ಆಪರೇಷನ್ ಅಜಯ್’ ಕಾರ್ಯಾಚರಣೆ ಪ್ರಾರಂಭಿಸಿತು. ಅಕ್ಟೋಬರ್ 7 ರಂದು ಯುದ್ಧ ಪ್ರಾರಂಭವಾದಾಗ ಏರ್ ಇಂಡಿಯಾ ಮತ್ತು ಇತರ ಏರ್ ಲೈನ್ಸ್ ತನ್ನ ಎಲ್ಲಾ ವಾಣಿಜ್ಯ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದ ನಂತರ ಈ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ವಿಶೇಷ ಚಾರ್ಟರ್ಡ್ ವಿಮಾನಗಳು ಭಾರತೀಯರನ್ನು ಮರಳಿ ಕರೆತರುತ್ತಿವೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.