ಬೆಂಗಳೂರು: ಪೈಪ್ ಲೈನ್ ರಸ್ತೆಯ ಚೋಳರಪಾಳ್ಯದಲ್ಲಿ ಅಗರಬತ್ತಿ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಶಾಮಕದಳದ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ.
ರವಿಕುಮಾರ್ ಎಂಬ ವ್ಯಕ್ತಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮನೆಗಳಲ್ಲೇ ಅಗರಬತ್ತಿ ತಯಾರಿಸಲಾಗುತ್ತಿದ್ದು ಏಕಾಏಕಿ ಕಾಣಿಸಿಕೊಂಡ ಬೆಂಕಿಯಿಂದಾಗಿ ರಾಸಾಯನಿಕಗಳಿಗೆ ಬೆಂಕಿ ಸೋಂಕಿ ರಸ್ತೆಗೂ ಬೆಂಕಿ ಆವರಿಸಿಕೊಂಡಿದೆ. ಈ ವೇಳೆ ಬೆಂಕಿಯ ಕೆನ್ನಾಲಿಗೆಗೆ ಮನೆ ಮುಂದೆ ನಿಲ್ಲಿಸಿದ್ದ ಎಂಟು ಬೈಕ್ ಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.
ವಿಜಯನಗರ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಲಗ್ಗೆರೆಯಲ್ಲಿ ಟ್ರಾನ್ಸ್ ಫಾರ್ಮರ್ ಸ್ಫೋಟ
ಲಗ್ಗೆರೆಯಲ್ಲಿ ಟ್ರಾನ್ಸ್ ಫಾರ್ಮರ್ ಗೆ ಬೆಂಕಿ ಹೊತ್ತಿಕೊಂಡು ಅಗ್ನಿ ಅವಘಡ ಸಂಭವಿಸಿದೆ. ಗುಜರಿ ಅಂಗಡಿಗೆ ಬೆಂಕಿ ವ್ಯಾಪಿಸಿ ಸಂಪೂರ್ಣ ಭಸ್ಮವಾಗಿದೆ. ಸ್ಥಳದಲ್ಲೇ ವೃದ್ದಾಶ್ರಮವೊಂದಿದ್ದು, ಅಲ್ಲಿದವರನ್ನು ಮುಂಜಾಗೃತಾ ಕ್ರಮವಾಗಿ ಸ್ಥಳಾಂತರಿಸಲಾಗಿದೆ.
ಬೆಂಕಿ ಹಲವು ಮನೆಗಳಿಗೂ ತಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಅಗ್ನಿ ಶಾಮಕ ದಳದ ಸಿಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.