ಮೈಸೂರು: ಮಹಿಳಾ ಹಾಗೂ ಮಕ್ಕಳ ದಸರಾ ಉಪಸಮಿತಿ ವತಿಯಿಂದ ಅ.18 ರಂದು ಬೆಳಿಗ್ಗೆ 10.30 ಕ್ಕೆ ಮಕ್ಕಳ ದಸರಾ ಉದ್ಘಾಟನಾ ಕಾರ್ಯಕ್ರಮವನ್ನು ನಗರದ ಜಗನ್ಮೋಹನ ಅರಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಮಹಿಳಾ ಹಾಗೂ ಮಕ್ಕಳ ದಸರಾ ಉಪಸಮಿತಿಯ ಕಾರ್ಯದರ್ಶಿಗಳಾದ ಎಚ್.ಕೆ ಪಾಂಡು ರವರು ತಿಳಿಸಿದರು.
ಇಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಮಕ್ಕಳ ದಸರಾ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅ.18 ಮತ್ತು 19 ರಂದು ಜಗನ್ಮೋಹನ ಅರಮನೆ ಆವರಣದಲ್ಲಿ ಮಕ್ಕಳ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪರವರು ನೆರವೇರಿಸುವರು ಎಂದು ತಿಳಿಸಿದರು.
ಹಲವಾರು ಕಾರ್ಯಕ್ರಮಗಳ ಮೂಲಕ ಎರಡು ದಿನಗಳ ಕಾಲ ಶಾಲಾ ಮಕ್ಕಳಿಗೆ ವೇದಿಕೆಯನ್ನು ಕಲ್ಪಿಸಲಾಗುವುದು. ಶಾಲಾ ಮಕ್ಕಳಿಗಾಗಿ ಆಶುಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ವಿವಿಧ ವೇಷಭೂಷಣ ಸ್ಪರ್ಧೆ, ಸಾಂಸ್ಕೃತಿಕ ನೃತ್ಯ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಖ್ಯಾತ ಕಲಾವಿದರಿಂದ ಸುಗಮ ಸಂಗೀತ ಕಾರ್ಯಕ್ರಮ, ಮಾತನಾಡುವ ಗೊಂಬೆ, ಶೈಕ್ಷಣಿಕ ನಾಟಕ ಪ್ರದರ್ಶನ, ಯೋಗ ನೃತ್ಯ ಜೊತೆಗೆ ದೇಸಿ ಆಟಗಳನ್ನು ಆಯೋಜಿಸಲಾಗಿದೆ ಎಂದರು.
ಶೈಕ್ಷಣಿಕ ವಸ್ತು ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಅರಣ್ಯ ಉತ್ಪನ್ನಗಳು, ಪರಿಸರ ಸಂರಕ್ಷಣೆ, ಮೈಸೂರಿನ ಪ್ರೇಕ್ಷಣೀಯ ಸ್ಥಳಗಳು, ಆರೋಗ್ಯ ಮತ್ತು ಪೌಷ್ಟಿಕಾಂಶ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ವಿಶೇಷವಾಗಿ ಚಂದ್ರಯಾನ ಹಾಗೂ ಆದಿತ್ಯಯಾನ ಕುರಿತಾದ ವಿಶೇಷ ಪ್ರದರ್ಶನ, ಶಿಕ್ಷಣದಲ್ಲಿ ರಂಗ ಕಲೆ, ಮೈಸೂರು ದಸರಾ ಪರಂಪರೆಯ ವಿವಿಧ ಪ್ರದರ್ಶನ ಆಯೋಜಿಸಲಾಗುತ್ತದೆ. ಮಕ್ಕಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸಂಗೀತ ಹಾಗೂ ಕ್ರೀಡಾ ವಿಭಾಗದಲ್ಲಿ ಹೆಸರು ಮಾಡಿದ ಬೆಸ್ಟ್ ಎಂಟರ್ಟೈನರ್ ಸರಿಗಮಪ ಸೀಸನ್ 19ರ ಸ್ಪರ್ಧಿ ಕು. ದಿಯಾ ಹೆಗಡೆ ಮತ್ತು ಕು. ಪ್ರಗತಿ ಬಡಗೇರ್, ರಾಜ್ಯಮಟ್ಟದ ಸೋಲೊ ಡ್ಯಾನ್ಸ್ ವಿಜೇತ ಜಿ.ಎಂ ಗಂಗಾಧರ್, ಖೋ-ಖೋ ರಾಷ್ಟ್ರೀಯ ಕ್ರೀಡಾಪಟು ಕು. ಮಾನಸರವರು ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಮಹಿಳಾ ಹಾಗೂ ಮಕ್ಕಳ ದಸರಾ ಉಪ ಸಮಿತಿ ಸದಸ್ಯರಾದ ಉದಯಕುಮಾರ್, ದೇವರಾಜು ಹಾಗೂ ಸೋಮಣ್ಣಗೌಡ್ರು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.