ಮೈಸೂರು: ವೈಚಾರಿಕ , ವೈಜ್ಞಾನಿಕ ಚಿಂತನೆಗೆ ಶಿಕ್ಷಣ ಅಗತ್ಯ. ಮೌಢ್ಯ ಹಾಗೂ ಕಂದಾಚಾರದಿಂದ ಸಮಾಜದ ಹಿನ್ನಡೆಯಾಗುತ್ತದೆ. ಶಿಕ್ಷಣ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.
ಅವರು ಇಂದು ಮೈಸೂರು ವಿಶ್ವವಿದ್ಯಾಲಯದ ಯುವರಾಜ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ (ರಿ) ವತಿಯಿಂದ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಿರುವ “ 20ನೆಯ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಜ್ಞಾನ ವಿಕಾಸವಾಗಲು ಶಿಕ್ಷಣ ಅಗತ್ಯ. ನಾವೂ ಅನಕ್ಷರಸ್ಥರಂತೆ ನಡೆದುಕೊಳ್ಳುವುದಾದರೆ ಶಿಕ್ಷಣದ ಅಗತ್ಯವೇ ಇಲ್ಲ. ಸಮಾಜದಲ್ಲಿ ಜಾತಿ ವ್ಯವಸ್ಥೆಯಿದೆ. ಜಾತಿಯಿಂದಲೇ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯಿದೆ. ಶೂದ್ರರು, ಮಹಿಳೆಯರು ಶಿಕ್ಷಣದಿಂದ ವಂಚಿತರಾಗಿದ್ದರು. ಸಮಾಜದಲ್ಲಿ ಅವಕಾಶಗಳಿಂದ, ನ್ಯಾಯದಿಂದ ವಂಚಿತರಾಗಿದ್ದರೆ, ಅವರ ಪರಿಸ್ಥಿತಿಯನ್ನು ಸುಧಾರಿಸಬೇಕು. ವೈಚಾರಿಕ , ವೈಜ್ಞಾನಿಕ ಚಿಂತನೆಗೆ ಶಿಕ್ಷಣ ಅಗತ್ಯ. ಮೌಢ್ಯಗಳು, ಕಂದಾಚಾರದಿಂದ ಸಮಾಜದ ಹಿನ್ನಡೆಯಾಗಿದೆ. ಶಿಕ್ಷಿತರು ಸಮಾಜದಲ್ಲಿ ಬದಲಾವಣೆಯನ್ನು ತರಲು ಪ್ರಯತ್ನಿಸಬೇಕು. ಚಲನೆಯಿಲ್ಲದ ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯವಿಲ್ಲ. ಶಿಕ್ಷಣದಿಂದ ಸಮಾಜಕ್ಕೆ ಚಲನೆ ದೊರೆತು ಆರ್ಥಿಕ, ಸಾಮಾಜಿಕ ಸಬಲತೆ ಸಾಧ್ಯವಾಗುತ್ತದೆ. ಇಂತಹ ಶಿಕ್ಷಣ, ಕಾಲೇಜುಗಳಲ್ಲಿ ದೊರೆಯಬೇಕು. ವಿಜ್ಞಾನದ ಜೊತೆಗೆ ಮೌಢ್ಯ, ಕಂದಾಚಾರಗಳಿಗೆ ಅವಕಾಶವಿಲ್ಲ. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನ ಶಿಕ್ಷಣವಾಗಬೇಕು ಎಂದು ತಿಳಿಸಿದರು.
ನಾನು ಸಾಮಾಜಿಕ ನ್ಯಾಯದ ಪರ
ಜಾತಿವಿರೋಧಿ ಎಂಬ ಆರೋಪ ನನ್ನ ಮೇಲಿದೆ. ಆದರೆ ನಾನು ಯಾವ ಜಾತಿಯ ವಿರೋಧಿಯೂ ಅಲ್ಲ. ನಾನು ಸಾಮಾಜಿಕ ನ್ಯಾಯದ ಪರವಾಗಿದ್ದು, ಮನುಷ್ಯ ಜಾತಿಯ ಪರವಾಗಿದ್ದೇನೆ. ಕುವೆಂಪು ಹೇಳಿದಂತೆ, ಹುಟ್ಟುವಾಗ ಎಲ್ಲರೂ ವಿಶ್ವಮಾನವರಾಗಿದ್ದು, ಬೆಳೆದಂತೆ ಅಲ್ಪಮಾನವರಾಗುತ್ತೇವೆ. ನಾವೆಲ್ಲರೂ ವಿಶ್ವಮಾನವರಾಗಿಯೇ ಉಳಿದುಕೊಳ್ಳುವುದೇ ಶಿಕ್ಷಣದ ಗುರಿಯಾಗಬೇಕು. ಸಂವಿಧಾನದ ವಿರುದ್ಧ ಮಾತನಾಡುವವರಿಗೆ ಕೆಲವು ವಿದ್ಯಾವಂತರು ಚಪ್ಪಾಳೆ ತಟ್ಟುವುದು ವಿಷಾದನೀಯ. ಅವಕಾಶವಂಚಿತರಿಗೆ ಸಮಾನತೆಯ ಅವಕಾಶ ದೊರೆಕಿಸಿಕೊಡುವುದೇ ಶಿಕ್ಷಣದ ಗುರಿಯಾಗಬೇಕು ಎಂದರು.
ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅನನ್ಯ :
ಹಳೆಯ ವಿದ್ಯಾರ್ಥಿ ಸಂಘಕ್ಕೆ 20ನೇ ವರ್ಷದ ಸಮಾರಂಭಕ್ಕೆ ನಾನು ಹಳೆಯ ವಿದ್ಯಾರ್ಥಿಯಾಗಿ ಭಾಗವಹಿಸಿದ್ದೇನೆ. ಮೈಸೂರು ವಿಶ್ವವಿದ್ಯಾಲಯ ಪ್ರಾರಂಭವಾಗಿ ಶತಮಾನ ಕಳೆದಿದೆ. ಶಿಕ್ಷಣ ಸಂಸ್ಥೆ, ಕೈಗಾರಿಕೆ, ಕಲೆ, ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರ ಹೀಗೆ ಮೈಸೂರಿನ ಸರ್ವತೋಮುಖ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾರಣರಾಗಿದ್ದಾರೆ. ಆ ಕಾಲದಲ್ಲಿ ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್, ಸರ್.ಎಂ.ವಿಶ್ವೇಶ್ವರಯ್ಯ ಬಹಳ ಪ್ರಗತಿಪರರಾಗಿದ್ದರು. ಕೆಆರ್ ಎಸ್ ಜಲಾಶಯ ಕೃಷ್ಣರಾಜ ಒಡೆಯರ್ ಹಾಗೂ ಸರ್ ಎಂವಿ ಅವರ ಕನಸಿನ ಯೋಜನೆ. ಕಾವೇರಿ ನೀರು ನಮಗೆ ದೊರೆಯದೇ , ಮಂಡ್ಯದಲ್ಲಿ ಕಬ್ಬು, ಭತ್ತ ಬೆಳೆಯಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ಡಾ.ಅಂಬೇಡ್ಕರ್ ಅವರು’ಇತಿಹಾಸ ತಿಳಿಯದವರು ಭವಿಷ್ಯ ನಿರ್ಮಿಸಲು ಸಾಧ್ಯವಿಲ್ಲ’ ಎಂದಿದ್ದರು.
ಯುವರಾಜ ಕಾಲೇಜಿನಲ್ಲಿ ವ್ಯಾಸಂಗ:
ಯುವರಾಜ ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ, ಮುಖ್ಯಮಂತ್ರಿಯಾಗುವ ಕಲ್ಪನೆಯೂ ಇರಲಿಲ್ಲ. ನಾನು ವೈದ್ಯನಾಗಬೇಕೆಂಬ ಆಸೆ ತಂದೆಯವರದಾಗಿತ್ತು. ಆದ್ದರಿಂದ ಈ ಕಾಲೇಜಿನಲ್ಲಿ ವ್ಯಾಸಂಗ ಮಾಡಿದೆ. 1968 ರಲ್ಲಿ ಬಿಎಸ್ ಸಿ ಪದವಿ ಪಡೆದು, ನಾಲ್ಕು ವರ್ಷಗಳ ಕಾಲ ಯುವರಾಜ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವುದಾಗಿ ತಮ್ಮ ಕಾಲೇಜಿನ ದಿನಗಳ ನೆನಪುಗಳನ್ನು ಹಂಚಿಕೊಂಡರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.