ಮನೆ ರಾಜ್ಯ ಅ.18 ರಂದು ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಘಟಿಕೋತ್ಸವ: ಪ್ರೋ. ನಾಗೇಶ್...

ಅ.18 ರಂದು ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಘಟಿಕೋತ್ಸವ: ಪ್ರೋ. ನಾಗೇಶ್ ವಿ ಬೆಟ್ಟಕೋಟೆ

0

ಮೈಸೂರು:  ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, 2019-20 ಮತ್ತು 2020 -21 ರ ಘಟಿಕೋತ್ಸವ ಸಮಾರಂಭವನ್ನು ಅಕ್ಟೋಬರ್ 18. ಸಂಜೆ 4:00ಗೆ ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ಭವನದಲ್ಲಿ ಏರ್ಪಡಿಸಲಾಗಿದೆ ಎಂದರು.

ಇಂದು ನಗರದ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಅವರನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ವಿಶ್ವವಿದ್ಯಾಲಯದ 5 ಮತ್ತು 6 ನೇ ಘಟಿಕೋತ್ಸವವನ್ನು ಆಚರಿಸಲಾಗುತ್ತಿದ್ದು ಘಟಿಕೋತ್ಸವದ ಅಂಗವಾಗಿ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಗೌರವಾನ್ವಿತ ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ತಾವರ್ ಚಂದ್ ಗೆಲ್ಲೋಟ್ ಅವರು ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಸನ್ಮಾನ್ಯ ಎಂ.ಸಿ ಸುಧಾಕರ್ ಅವರು ಘಟಿಕೋತ್ಸವದಲ್ಲಿ ಉಪಸ್ಥಿತರಿರುವರು, ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವದ ಭಾಗವಹಿಸುವರು.

ಘಟಿಕೋತ್ಸವದಲ್ಲಿ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕಗಳ ವಿಶ್ವವಿದ್ಯಾಲಯದಿಂದ ಐದನೇ ಘಟಿಕೋತ್ಸವದ ಅಂಗವಾಗಿ ಕರ್ನಾಟಕ ಸಂಗೀತ ಕ್ಷೇತ್ರದಲ್ಲಿ ಸುದೀರ್ಘ 40 ವರ್ಷಗಳ ಸೇವೆ ಮಾಡಿರುವ ವಿದುಷಿ ಡಿ. ಶಶಿಕಲಾ (ವಿಶೇಷ ಚೇತನ) ಅವರಿಗೆ, ಹಿಂದುಸ್ತಾನಿ ಸಂಗೀತ ಗಾಯನದಲ್ಲಿ ಪ್ರಸಿದ್ಧರಾದ ಪಂಡಿತ್ ವಿನಾಯಕ ತೊರವಿ ಅವರಿಗೆ ಹಾಗೂ ಸಂಗೀತದಲ್ಲಿ, ಶಿಕ್ಷಣ ಮತ್ತು ಸಂಶೋಧನೆಯಲ್ಲಿ ತೊಡಗಿರುವ ಶ್ರೀ ಮಧುಸೂದನ್ ಸಾಯಿ ಅವರಿಗೆ, 6ನೇ ಘಟಿಕೋತ್ಸವದ ಅಂಗವಾಗಿ ಸಂಗೀತ ಸಂಶೋಧನೆಯಲ್ಲಿ ತೊಡಗಿರುವ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಹಿಂದುಸ್ತಾನಿ ಸಂಗೀತ ಕ್ಷೇತ್ರದ ಪರಿಣಿತರಾದ ಪಂಡಿತ ಶ್ರೀಪಾದ ಹೆಗಡೆ ಕಂಪ್ಲಿ ಮತ್ತು ಕರ್ನಾಟಕ ಸಂಗೀತ ಕ್ಷೇತ್ರದಲ್ಲಿ ಪ್ರೊ. ಎಸ್ ಸಿ ಶರ್ಮಾ ಅವರಿಗೆ ಒಟ್ಟು ಆರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ.

ಅಲ್ಲದೆ ವಿವಿಧ ವಿಷಯಗಳಲ್ಲಿ ದೇಸಿ ಸಂಗೀತ ಐದನಿ ಕುರಿತಂತೆ ಡಾ. ಹಂಸಲೇಖ ಅವರಿಗೆ, ಪುಜಾಸತ್ತಾತ್ಮಕ ಪಕ್ರಿಯೆಯಲ್ಲಿ ಡಾ. ರಾಜಕುಮಾರ್ ಪಾತ್ರ ವಿಷಯದಲ್ಲಿ ಮಂಜುನಾಥ್ ಎಂ ಅವರಿಗೆ, ಕೋನಾರ್ಕ್ ದೇವಾಲಯದ ವಾಸ್ತುಶಿಲ್ಪದಲ್ಲಿನ ನೃತ್ಯಭಂಗಿ ಕುರಿತು ಶ್ರೀಮತಿ ಶಾಲಿನಿ ಎ ಆರ್, ದಕ್ಷಿಣ ಭಾರತದ ಕರ್ನಾಟಕ ಸಂಗೀತದಲ್ಲಿ ತಂತಿ ವಾದ್ಯಗಳು ವಿಷಯದಲ್ಲಿ ಡಾ.ಸೌಮ್ಯಾ ಎಸ್ ರಂಗಭೂಮಿ ಒಂದು ವೃತ್ತಿಪರ ಅಧ್ಯಯನಕ್ಕೆ ಕೆ ಎನ್ ಹಿರಣ್ಣಯ್ಯ ಅವರಿಗೆ ಮತ್ತು ಯೋಗಾ ಮತ್ತು ಪ್ರದರ್ಶನ ಕಲೆಗಳ ಶಿಕ್ಷಣ ಮತ್ತು ಮಾನಸಿಕ ಬದಲಾವಣೆಯ ಮೇಲಿನ ಪರಿಣಾಮಗಳ ವಿಷಯದಲ್ಲಿ ಡಾ. ಎ ಲೋಕೇಶ್ ಅವರು ಸೇರಿದಂತೆ ಒಟ್ಟು ಆರು ಜನರಿಗೆ ಡಿಲೀಟ್ ಪದವಿ ನೀಡಲಾಗುತ್ತಿದೆ.

2019-2020 ನೇ ಸಾಲಿನಲ್ಲಿ ಉತ್ತೀರ್ಣರಾದ  MPA ವಿಭಾಗದಲ್ಲಿ -06, BPA ವಿಭಾಗದಲ್ಲಿ -03 ವಿದ್ಯಾರ್ಥಿಗಳಿಗೆ ಮತ್ತು 2020-2021 ನೇ ಸಾಲಿನಲ್ಲಿ MPA ವಿಭಾಗದಲ್ಲಿ -07,BPA ವಿಭಾಗದಲ್ಲಿ -03 ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ನಗದು ಬಹುಮಾನ ನೀಡಲಾಗುತ್ತದೆ.

ಸರ್ಕಾರವು ವಿಶ್ವವಿದ್ಯಾಲಯದ ಹೊಸ ಕಟ್ಟಡಕ್ಕೆ ಅನುಮತಿಯನ್ನು ನೀಡಿದ್ದು ಮುಂದಿನ ದಿನಗಳಲ್ಲಿ ಹೊಸ ಕಟ್ಟಡ ನಿರ್ಮಾಣವಾಗಲಿದೆ. ತದನಂತರದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಕುಲಪತಿಗಳಾದ ಪ್ರೋ. ನಾಗೇಶ್ ವಿ ಬೆಟ್ಟಕೋಟೆ ತಿಳಿಸಿದರು.