ಮನೆ ರಾಜ್ಯ ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತ: ಸವಾರ ಸಾವು

ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತ: ಸವಾರ ಸಾವು

0

ಮಣಿಪಾಲ: ಪರ್ಕಳ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಜಕದ ಬಳಿ ಬೈಕ್ ಅಪಘಾತ ಸಂಭವಿಸಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ.

ಮೃತ ಯುವಕನನ್ನು ಹಿರಿಯಡ್ಕದ ನಿವಾಸಿ ಅಕ್ಷಯ ಭಟ್ (26) ಎಂದು ತಿಳಿದುಬಂದಿದೆ.

ಯುವಕ ಅವಿವಾಹಿತನಾಗಿದ್ದು, ಅಡುಗೆ ವೃತ್ತಿ ಮಾಡಿಕೊಂಡಿದ್ದರು ಎನ್ನಲಾಗಿದ್ದು. ಇಂದ್ರಾಳಿಯ ದೇವಸ್ಥಾನವೊಂದರಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆ ಅಡುಗೆ ಕೆಲಸ ನಿರ್ವಹಿಸಲು ಮನೆಯಿಂದ ಬರುವ ಸಂದರ್ಭ ಈ ದುರ್ಘಟನೆ ನಡೆದಿದೆ.

ಮಣಿಪಾಲ ಪೋಲಿಸ್ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕೆ ತೆರಳಿ ಕಾನೂನು ಪ್ರಕ್ರಿಯೆ ನಡೆಸಿ ಶವವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.