ಮನೆ ಸ್ಥಳೀಯ ಮೈಸೂರು ವಿವಿಯ 13ನೇ ವಾರ್ಷಿಕ ಘಟಿಕೋತ್ಸವ: 32,240 ಮಂದಿ ಅಭ್ಯರ್ಥಿಗಳಿಗೆ ಪದವಿ ಪ್ರದಾನ

ಮೈಸೂರು ವಿವಿಯ 13ನೇ ವಾರ್ಷಿಕ ಘಟಿಕೋತ್ಸವ: 32,240 ಮಂದಿ ಅಭ್ಯರ್ಥಿಗಳಿಗೆ ಪದವಿ ಪ್ರದಾನ

0

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 13ನೇ ವಾರ್ಷಿಕ ಘಟಿಕೋತ್ಸವ ಇಂದು ನಡೆಯಿತು.

ಮೈಸೂರು ವಿವಿ ಆವರಣದಲ್ಲಿನ ಕ್ರಾಫರ್ಡ್ ಹಾಲ್ ನಲ್ಲಿ ಇಂದು ಬೆಳಿಗ್ಗೆ ಮೈಸೂರು ವಿ ವಿ ಘಟಿಕೋತ್ಸವ ಸಮಾರಂಭ ನಡೆಯಿತು.

ಈ ಬಾರಿ ರಾಜೀವ್ ಗಾಂಧಿ ಆ ರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ನಾಡೋಜ ಡಾ. ಪಿ ಎಸ್ ಶಂಕರ್, ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಸಂಸ್ಥಾಪಕ ಸಂಪಾದಕ ಕೆಬಿ ಗಣಪತಿ ಹಾಗೂ ಅಂತರಾಷ್ಟ್ರೀಯ ಮಾಜಿ ಕ್ರಿಕೆಟ್ ಆಟಗಾರ ಜಾವಗಲ್ ಶ್ರೀನಾಥ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು.

ರಾಜ್ಯಪಾಲ ಹಾಗೂ ವಿವಿ ಕುಲಧಿಪತಿ ತಾವರ್ ಚಂದ್ ಗೆಹ್ಲೋಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಡಾಕ್ಟರೇಟ್ ಪದವಿಯನ್ನು ಈ ಮೂರು ಮಂದಿಗೆ ಪ್ರದಾನ ಮಾಡಲಾಯಿತು.

ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ ವಿಶ್ರಾಂತ ಮಹಾ ನಿರ್ದೇಶಕ ಪದ್ಮಭೂಷಣ ಡಾಕ್ಟರ್ ವಾಸುದೇವ ಕೆ. ಅತ್ರೆ ಅವರು ಘಟಿಕೋತ್ಸವ ಭಾಷಣ ಮಾಡಿದರು. ಉನ್ನತ ಶಿಕ್ಷಣ ಸಚಿವ ವಿವಿ ಸಮಕುಲಾದಧಿಪತಿ ಡಾ. ಎಂ. ಸಿ. ಸುಧಾಕರ್ ಅವರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಒಟ್ಟು 32,240 ಮಂದಿ ಅಭ್ಯರ್ಥಿಗಳಿಗೆ ಪಿ ಎಚ್ ಡಿ ಹಾಗೂ ನಾನಾ ಪದವಿ ಪ್ರದಾನ ಮಾಡಲಾಯಿತು.

ಪದವಿ ಪಡೆಯುತ್ತಿರುವ ಪೈಕಿ 1251 ಮಂದಿ ಪುರುಷರಿದ್ದಾರೆ. 20189 ಮಂದಿ ಮಹಿಳಾ ಅಭ್ಯರ್ಥಿಗಳಿದ್ದಾರೆ. ಈ ಘಟಿಕೋತ್ಸವದಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಪದವಿಯನ್ನು ಪಡೆಯುತ್ತಿದ್ದಾರೆ. ವಿವಿಧ ವಿಷಯಗಳಲ್ಲಿ 539 ಅಭ್ಯರ್ಥಿಗಳು ಪಿ ಹೆಚ್ ಡಿ ಪದವಿ ಪಡೆಯುತ್ತಿದ್ದಾರೆ. ಹಾಗೆಯೇ 420 ಚಿನ್ನದ ಪದಕ 275 ನಗದು ಬಹುಮಾನಗಳನ್ನು 249 ಅಭ್ಯರ್ಥಿಗಳು ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 180 ಮಂದಿ ಮಹಿಳಾ ಅಭ್ಯರ್ಥಿಗಳಿದ್ದಾರೆ. 5627 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುತ್ತಿದೆ. ಹಾಗೆಯೇ 2674 ಮಂದಿ ಅಭ್ಯರ್ಥಿಗಳಿಗೆ ಸ್ನಾತಕ ಪದವಿ ಪ್ರದಾನ ಮಾಡಲಾಯಿತು.

ಇಂದಿನ ಸಮಾರಂಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್. ಕೆ. ಲೋಕನಾಥ್, ವಿ ವಿ ಕುಲ ಸಚಿವರಾದ ವಿ. ಆರ್. ಶೈಲಜಾ, ಪ್ರೊ. ಕೆ. ಎ. ಮಹಾದೇವನ್ ಸೇರಿದಂತೆ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.