ಮನೆ ರಾಜಕೀಯ ಪಿಎಸ್ ಐ ನೇಮಕಾತಿ ಅಕ್ರಮ: ನಿಮಗೂ ನೋಟಿಸ್ ನೀಡಬೇಕಲ್ಲವೇ ? ಎಂದು ಅರಗ ಜ್ಞಾನೇಂದ್ರಗೆ ಕಾಂಗ್ರೆಸ್...

ಪಿಎಸ್ ಐ ನೇಮಕಾತಿ ಅಕ್ರಮ: ನಿಮಗೂ ನೋಟಿಸ್ ನೀಡಬೇಕಲ್ಲವೇ ? ಎಂದು ಅರಗ ಜ್ಞಾನೇಂದ್ರಗೆ ಕಾಂಗ್ರೆಸ್ ಪ್ರಶ್ನೆ

0

ಬೆಂಗಳೂರು(Bengaluru): ಪಿಎಸ್‌ಐ(PSI) ನೇಮಕಾತಿ(Recruitment) ಅಕ್ರಮ(Illegal) ಪ್ರಕರಣಕ್ಕೆ(Case) ಸಂಬಂಧಿಸಿ ಕಾಂಗ್ರೆಸ್‌(Congress) –ಬಿಜೆಪಿ(BJP) ಮುಖಂಡರ(Leaders) ನಡುವೆ ಪರಸ್ಪರ ಕೆಸರೆರಚಾಟ ಮುಂದುವರೆದಿದ್ದು, ಟ್ವೀಟ್ (Tweet)ಮೂಲಕ ಕಾಂಗ್ರೆಸ್, ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿದೆ.

‘ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮವೇ ಆಗಿಲ್ಲವೆಂದು ಇಷ್ಟು ಆತ್ಮವಿಶ್ವಾಸದಿಂದ ಸದನದಲ್ಲಿ ಸಮರ್ಥಿಸಿದ ಅರಗ ಜ್ಞಾನೇಂದ್ರ ಅವರೇ, ಈ ಸಮರ್ಥನೆಗೂ, ದಿವ್ಯಾ ಹಾಗರಗಿ ಬಂಧನ ಆಗದಿರುವುದಕ್ಕೂ, ನೀವು ಅವರ ಆದರಾತಿಥ್ಯ ಸ್ವೀಕರಿಸಿದ್ದಕ್ಕೂ ಗಾಢಸಂಬಂಧ ಇದೆಯಲ್ಲವೇ’ ಪ್ರಕರಣಕ್ಕೆ ಸಂಬಂಧಿಸಿ ನಿಮ್ಮ ಸಮರ್ಥನೆಯನ್ನು ಬಾಲಿಶತನ ಎನ್ನೋಣವೇ?, ಸಿಐಡಿ ತನಿಖೆಗಾಗಿ ನಿಮಗೂ ನೋಟಿಸ್ ನೀಡಬೇಕಲ್ಲವೇ’ ಎಂದು ಕಾಂಗ್ರೆಸ್ ತನ್ನ ಟ್ವೀಟ್ ನಲ್ಲಿ ಪ್ರಶ್ನಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ರುದ್ರಗೌಡ ಡಿ. ಪಾಟೀಲ ಸೇರಿದಂತೆ ಹಲವರನ್ನು ಪೊಲೀಸರು ಈಗಾಗಲೇ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಇತರೆ ಆರೋಪಿಗಳು ಎರಡು ವಾರಗಳಿಂದ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.