ಮನೆ ರಾಜಕೀಯ ರಾಜ್ಯದಲ್ಲಿರುವುದು ʻದೌರ್ಭಾಗ್ಯದ ಸರ್ಕಾರʼ: ಸಿದ್ದರಾಮಯ್ಯ

ರಾಜ್ಯದಲ್ಲಿರುವುದು ʻದೌರ್ಭಾಗ್ಯದ ಸರ್ಕಾರʼ: ಸಿದ್ದರಾಮಯ್ಯ

0

ಬೆಂಗಳೂರು (Bengaluru)-ರಾಜ್ಯದಲ್ಲಿ ʻದೌರ್ಭಾಗ್ಯದ ಸರ್ಕಾರʼ ಇದ್ದು, ಸರಕಾರವೇ ಭ್ರಷ್ಟಾಚಾರದಲ್ಲಿ ಶಾಮೀಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ರಾಜ್ಯದಲ್ಲಿ ಭಾಗ್ಯಗಳ ಸರ್ಕಾರ ಇತ್ತು. ಆದರೆ ಇದೀಗ ರಾಜ್ಯದಲ್ಲಿ ದೌರ್ಭಾಗ್ಯದ ಸರ್ಕಾರ ಇದೆ. ‘ರಾಜ್ಯ ಸರ್ಕಾರದಲ್ಲಿ ವ್ಯಾಪಕ‌ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಕಾರವೇ ಭ್ರಷ್ಟಾಚಾರದಲ್ಲಿ ಶಾಮೀಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮ‌ಅವಧಿಯಲ್ಲಿ ಯಾವ ಸಾಧನೆ ಮಾಡಿದ್ದೆವು. ಈಗ ಅವರ ಸರ್ಕಾರದಲ್ಲಿ ಏನು ಸಾಧನೆ ಮಾಡಿದ್ದಾರೆ ಎಂಬುದನ್ನು ಜನರ ಮುಂದಿಡುತ್ತೇವೆ. ಪಿಎಸ್ ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ದಿವ್ಯಾ ಹಾಗರಗಿ ಬಿಜೆಪಿ ನಾಯಕಿ. ಆದರೆ ಇಲ್ಲಿಯವರೆಗೆ ಆಕೆಯನ್ನು ಅರೆಸ್ಟ್ ಮಾಡಿಲ್ಲ. 15 ದಿನಗಳಾದ್ರೂ ಅವರನ್ನ ಬಂಧಿಸಿಲ್ಲ. ಅವರು ಜಾಮೀನು‌ ತೆಗೆದುಕೊಳ್ಳಲಿ ಎಂದು ಕಾಯುತ್ತಿದ್ದಾರೆ. ಈ ಮೂಲಕ ಭ್ರಷ್ಟರನ್ನು ರಕ್ಷಿಸುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಆರೋಪಿಸಿದರು.

ಗುತ್ತಿಗೆದಾರದ ಸಂಘದವರು ಲಂಚದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರವನ್ನು ಬರೆದಿದ್ದಾರೆ. ‌ಆದರೆ ಪ್ರಧಾನಿ ಇಲ್ಲಿಯವರೆಗೆ ಯಾವ ಕ್ರಮ ಕೈಗೊಂಡಿಲ್ಲ. ಪ್ರಧಾನಿ ಮೋದಿ ನಾನು ಚೌಕಿದಾರ್ ಅಂತ ಹೇಳುತ್ತಾರೆ. ಆದರೆ ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಕೇಂದ್ರದ ಕುಮ್ಮಕ್ಕಿದೆ ಎಂದು ಆರೋಪಿಸಿದರು.

ಕೆ.ಎಸ್.ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಬಂತು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡರು. ಈಶ್ವರಪ್ಪನವರು ಹಿಂದುತ್ವದ ಬಗ್ಗೆ ಮಾತನಾಡುತ್ತಿದ್ದರು. ಆದರೆ ಬರೀ ಸುಳ್ಳುಗಳನ್ನೇ ಹೇಳಿ ಮರೆಮಾಚುತ್ತಿದ್ದಾರೆ ಎಂದು ಹೇಳಿದರು.

ಸರ್ಕಾರವೇ ರಾಜ್ಯದ ಕೋಮು ಸಾಮರಸ್ಯವನ್ನು ಹಾಳುಮಾಡ್ತಿದ್ದಾರೆ. ಹರ್ಷ ಕೊಲೆ ಸಂದರ್ಭದಲ್ಲಿ ಈಶ್ವರಪ್ಪ ಶಿವಮೊಗ್ಗದಲ್ಲಿ 144 ಸೆಕ್ಷನ್ ಉಲ್ಲಂಘನೆ ಮಾಡಿದ್ದರು. ಭಗವಂತ ಖೂಭಾ ಕೂಡಾ 144 ಸೆಕ್ಷನ್ ಉಲ್ಲಂಘನೆ ಮಾಡಿದ್ದಾರೆ ಅವರ ವಿರುದ್ಧ ಕ್ರಮ ಇಲ್ಲ. ಆದರೆ ನಾವು ಮೇಕೆದಾಟು ಯೋಜನೆ ಪಾದಯಾತ್ರೆ ಮಾಡಿದ್ದಕ್ಕೆ ನಮ್ಮ ಮೇಲೆ ಎಫ್ ಐ ಆರ್ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಿದ್ದು ಅವರು, ಈ ಎಲ್ಲದರ ವಿರುದ್ಧ ಈಗಾಗಲೇ ಒಂದು ಸುತ್ತಿನ ಹೋರಾಟ ಮಾಡಿದ್ದೇವೆ. ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದರು.