ಮೈಸೂರು: ಕ್ಯಾಪ್ಟನ್ ಅಭಿಮನ್ಯು ಹೊತ್ತ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.
ಅರಮನೆ ಆವರಣದಲ್ಲಿ ನಿರ್ಮಿಸಲಾಗಿದ್ದ ವೇದಿಕೆ ಬಳಿಗೆ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ಚಿನ್ನದ ಅಂಬಾರಿ ಹೊತ್ತು ಆಗಮಿಸಿದ್ದು ಅಂಬಾರಿಯಲ್ಲಿ ಪ್ರತಿಷ್ಟಾಪಿಸಲಾದ ತಾಯಿ ಚಾಮುಂಡೇಶ್ವರಿಗೆ ಶುಭಮೀನ ಲಗ್ನದಲ್ಲಿ ಸಿಎಂ ಸಿದ್ಧರಾಮಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಸಿಎಂ ಸಿದ್ಧರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್, ರಾಜವಂಶಸ್ಥ ಯದುವೀರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಸಾಥ್ ನೀಡಿದರು.
ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡಿದೆ. ಸತತ 4ನೇ ಬಾರಿ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊತ್ತಿದ್ದು, ಜಂಬೂ ಸವಾರಿ ಮೆರವಣಿಗೆ, ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್, ತಿಲಕ್ ನಗರ, ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ. ಸುಮಾರು 5 ಕಿಲೋ ಮೀಟರ್ ಈ ಜಂಬೂ ಸವಾರಿ ನಡೆಯಲಿದೆ.
ಸತತ 4ನೇ ಬಾರಿ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು
ಸತತ 4ನೇ ಬಾರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಸಾಗುತ್ತಿದೆ. ಇನ್ನು ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ ಹಾಗೂ ವಿಜಯಾ ಸಾಥ್ ನೀಡುತ್ತಿವೆ. ಅರಮನೆಯಿಂದ ಬನ್ನಿಮಂಟಪದವರೆಗೆ ಈ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ ಬರೊಬ್ಬರಿ 49 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿದ್ದು, ಲಕ್ಷಾಂತರ ಜನರು ದಸರಾ ಜಂಬೂಸವಾರಿಗೆ ಸಾಕ್ಷಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.