ಮೈಸೂರು: ‘ವಿದ್ಯೆ ಇಲ್ಲದೆ ಇದ್ದರೂ ಪ್ರಜ್ಞಾವಂತಿಕೆ ಬೇಕು. ಸಾಮಾನ್ಯ ಜ್ಞಾನವಿರಬೇಕು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ರಾಮನಗರದ ಇತಿಹಾಸವನ್ನು ತಂದೆ ಎಚ್.ಡಿ. ದೇವೇಗೌಡರನ್ನು ಕೇಳಿ ತಿಳಿದುಕೊಳ್ಳಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ಇಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಅವರು, ಆದಿಚುಂಚನಗಿರಿ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ ಹಾಗೂ ಕೆಂಪೇಗೌಡರು ಜನಿಸಿದ್ದು ರಾಮನಗರದಲ್ಲಿ. ನಾವೆಲ್ಲರೂ ಬೆಂಗಳೂರಿನವರು. ಮಂಡ್ಯಕ್ಕೆ ಪ್ರತ್ಯೇಕ ವಿಶ್ವವಿದ್ಯಾಲಯ ಮಾಡಿದರೂ ಮೈಸೂರು ವಿಶ್ವವಿದ್ಯಾಲಯವೇ ಬಹಳ ಮುಖ್ಯ. ಇದೂ ಅದೇ ರೀತಿಯೇ ಎಂದು ಪ್ರತಿಪಾದಿಸಿದರು.
ಮಾಗಡಿ, ರಾಮನಗರ, ಚನ್ನಪಟ್ಟಣದ ಬಹಳ ಜನರು ಆಸ್ತಿ ಮಾರುತ್ತಿದ್ದಾರೆ. ಆಸ್ತಿ ಮಾರಿಕೊಳ್ಳಬೇಡಿ, ಉಳಿಸಿಕೊಳ್ಳಿ ಎಂದು ಹೇಳಿದ್ದೇನೆ. ನಾನು ಕನಕಪುರ ಪ್ರವೇಶಿಸಿದ ಮೇಲೆ ಭೂಮಿ ಬೆಲೆ ಏನಾಯಿತು ಎಂಬುದು ಜನರಿಗೆ ಗೊತ್ತಿದೆ. ಇಡೀ ರಾಮನಗರ ಜಿಲ್ಲೆಯೇ ಬೆಂಗಳೂರಿಗೆ ಸೇರಿದ್ದು. ಮಾಗಡಿ, ಚನ್ನಪಟ್ಟಣ ಸೇರಿ ಎಲ್ಲವೂ ಬೆಂಗಳೂರಿನದ್ದೇ. ಈ ವಿಚಾರದಲ್ಲಿ ನನಗೇನೂ ಆತುರವಿಲ್ಲ. ಕುಮಾರಸ್ವಾಮಿ ಹೇಳಿಕೆಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಾನು ಮತ್ತು ನಮ್ಮ ಸರ್ಕಾರದಿಂದ ಏನು ಮಾಡುತ್ತೇವೆಯೋ ಅದು ಮುಖ್ಯ ಎಂದು ಪ್ರತಿಕ್ರಿಯಿಸಿದರು.
ಇಲ್ಲಿ ಯಾರು ಯಾರದ್ದನ್ನೂ ಕಸಿದುಕೊಳ್ಳಲು ಹೋಗುವುದಿಲ್ಲ. ರಾಮನಗರ ಮಾಡಿದ್ದ ಕ್ರೆಡಿಟ್ ಅನ್ನು ಕುಮಾರಸ್ವಾಮಿ ಅವರೇ ಇಟ್ಟುಕೊಳ್ಳಲಿ. ಇನ್ನೊಬ್ಬ ತಲೆ ಕೆಟ್ಟ ಬಿಜೆಪಿ ಎಂಎಲ್ ಸಿ ಏನೇನೋ ಮಾತನಾಡುತ್ತಾನೆ. ಏಕೆ ಅಷ್ಟು ಆತುರ? ವಿಜಯದಶಮಿಯ ದಿನ ಶುಭ ಮುಹೂರ್ತ ಹಾಗೂ ಶುಭ ಗಳಿಗೆಯಲ್ಲಿ ಈ ಮಾತು ಹೇಳಿದ್ದೇನೆ ಎಂದರು.
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.