ಮೈಸೂರು: ನಾಡಹಬ್ಬ ಮೈಸೂರು ದಸರೆಗೆ ಹೊಸ ನೋಟ ಕೊಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮಾತನಾಡಿದ ಅವರು, ಎಸ್.ಬಂಗಾರಪ್ಪ ಹಾಗೂ ಎಸ್.ಎಂ. ಕೃಷ್ಣ ಮಂತ್ರಿ ಮಂಡಲದಲ್ಲಿದ್ದಾಗ ದಸರಾ ನೋಡಿದ್ದನ್ನು ನೆನೆದರು. ಪಂಜಿನ ಕವಾಯತು ತುಂಬಾ ಚೆನ್ನಾಗಿತ್ತು. ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಕ್ರಮ ನಡೆದಿದೆ. ದಸರೆಗೆ ಲಕ್ಷಾಂತರ ಮಂದಿ ಬಂದಿದ್ದರು. ಮುಂದಿನ ದಿನಗಳಲ್ಲಿ ಥೀಮ್ ಬದಲಾಗಬೇಕು ಎಂದು ತಿಳಿಸಿದರು.
ಪರಂಪರೆ ಉಳಿಸಿಕೊಂಡು ಬಂದಿದ್ದೇವೆ. ಪ್ರತಿ ಜಿಲ್ಲೆಗಳಲ್ಲೂ ಸ್ತಬ್ಧಚಿತ್ರದ ಸ್ಪರ್ಧೆ ನಡೆಯಬೇಕು. ಈ ಉತ್ಸವಕ್ಕೆ 400 ವರ್ಷಗಳ ಇತಿಹಾಸವಿದೆ. ಪರಂಪರೆಯನ್ನು ಉಳಿಸಿಕೊಂಡು ನೂತನ ನೋಟ ಕೊಡಬೇಕು. ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ಕೊಡಬೇಕು. ಮೈಸೂರಿಗೆ ಬರುವ ಅತಿಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದರು.
ಇಲ್ಲಿನ ಅಧಿಕಾರಿಗಳು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಆದರೆ, ದಸರೆಯನ್ನು ಮೈಸೂರಿಗೆ ಸೀಮಿತಗೊಳಿಸಲು ಬಿಡುವುದಕ್ಕೆ ಸಾಧ್ಯವಿಲ್ಲ. ರಾಜ್ಯಮಟ್ಟದ ಅಧಿಕಾರಿಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.